8:12 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಪುತ್ತೂರು: ಮುಳಿಯ ನವೀಕೃತ, ವಿಸ್ತೃತ ಶೋರೂಂ ‘ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್’ ಏ.20ರಂದು ಉದ್ಘಾಟನೆ

15/04/2025, 19:28

ಚಿತ್ರ: ಅನುಷ್ ಪಂಡಿತ್ ಮಂಗಳೂರು
ಪುತ್ತೂರು(reporterkarnataka.com): ಸುಮಾರು 80 ವರ್ಷಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ನವೀಕೃತ ವಿಸ್ತೃತ ಶೋರೂಂ ‘ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್’ ಎಂಬ ಹೊಸ ಹೆಸರಿನೊಂದಿಗೆ ಏ.20ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಅವರು ನೂತನ ಶೋರೂಂಗೆ ಚಾಲನೆ ನೀಡಲಿದ್ದಾರೆ. ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಈ ಮಳಿಗೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹಾಗೂ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಅವರು ತಿಳಿಸಿದರು.
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಮ್ಮ ಹೆಮ್ಮೆ. ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯದ ವಿಶೇಷತೆ. ಈ ಹೊಸ ಶೋರೂಂ ನಂಬಿಕೆ ಮತ್ತು ಪರಂಪರೆಯ ಜೊತೆಗೆ ಮುಳಿಯದ ಸಾಮಾಜಿಕ ಜವಾಬ್ದಾರಿಯ ಸೇವೆಯೊಂದಿಗೆ ಗ್ರಾಹಕರಿಗೆ ಸಂತೃಪ್ತಿ ಮತ್ತು ಸಂತೋಷ ನೀಡುತ್ತಾ ಬಂದಿದೆ. ಇನ್ನಷ್ಟು ದುಪ್ಪಟ್ಟು ಸಂತೋಷ ನೀಡುವಲ್ಲಿ ಸದಾ ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲಿದೆ ಎಂದು ಕೇಶವ ಪ್ರಸಾದ್ ಮುಳಿಯ ಹೇಳಿದರು.


ಕಳೆದ ಮೂರು ತಲೆಮಾರಿನಿಂದ ಜನತೆಯ ವಿಶ್ವಾಸಗಳಿಸಿ ಬೆಳೆಯುತ್ತಿರುವ ನಮ್ಮ ಸಂಸ್ಥೆ, ಜನರಿಗೆ ಚಿನ್ನದೊಂದಿಗೆ ಸಂತೃಪ್ತಿ, ಸಂತೋಷವನ್ನು ನೀಡಿದೆ. ನೀವು ಮನಸಾರೆ ನಮ್ಮನ್ನು ಹರಸಿದ್ದೀರಿ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೊಸತನದೊಂದಿಗೆ ಬರುತ್ತಿದ್ದೇವೆ ಎಂದು ಕೃಷ್ಣ ನಾರಾಯಣ ಮುಳಿಯ ನುಡಿದರು.
ಅನಾವರಣಗೊಳ್ಳಲಿರುವ ಈ ಅತ್ಯಾಧುನಿಕ ಶೈಲಿ ಮತ್ತು ವಿನ್ಯಾಸದ 4 ಅಂತಸ್ತಿನ ವಿಶಾಲ ಶೋರೂಂನಲ್ಲಿ ಚಿನ್ನ, ಬೆಳ್ಳಿ, ವಜ್ರ, ಆಧುನಿಕ ಬ್ರಾಂಡೆಡ್ ವಾಚುಗಳು, ಗಿಫ್ಟ್ ಐಟಂ ಹಾಗೂ ವಿವಿಧ ಬಗೆಯ ಚಿನ್ನಾಭರಣಗಳ ಕೌಂಟರ್ ಗಳು ಇರಲಿವೆ. ನಮ್ಮ ಬೆಂಗಳೂರು, ಬೆಳ್ತಂಗಡಿ, ಮಡಿಕೇರಿ ಶೋ ರೂಂಗಳು ಮತ್ತಷ್ಟು ವಿಶಾಲವಾಗಿ ನವೀಕೃತಗೊಳ್ಳುತ್ತಿವೆ. ಗೋಣಿಕೊಪ್ಪದಲ್ಲಿ ನಮ್ಮದೇ ಆದ ಶೋರೂಂ ನಿರ್ಮಾಣಗೊಳ್ಳಲಿದೆ‌. ವಿಶಾಲ ಪಾರ್ಕಿಂಗ್, ಗ್ರಾಹಕರಿಗೆ ಊಟ, ತಿಂಡಿಯ ವ್ಯವಸ್ಥೆ, ಮಕ್ಕಳ ಆಟ ಮತ್ತು ಆರೈಕೆಗೆ ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾರ್ಕೆಟಿಂಗ್ ಕನ್ಸಲ್ಟೆನ್ಸ್ ವೇಣು ಶರ್ಮ, ಶೋರೂಂ ಸಹ ಪ್ರಬಂಧಕ ರಾಘವೇಂದ್ರ ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು