8:16 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

Puttur | ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ವಠಾರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆ ಆರಂಭ

17/12/2025, 11:17

ಪುತ್ತೂರು(reporterkarnataka.com): ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ದೇವಾಲಯ ಸಂವರ್ಧನಾ ಸಮಿತಿಯ ವತಿಯಿಂದ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಉದ್ಘಾಟನೆ ಜಲದುರ್ಗಾದೇವಿ ದೇವಸ್ಥಾನ ದಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ದೀಪೊಜ್ವಲನದ ಮೂಲಕ ಶ್ರೀನಿವಾಸ ಹೆಬ್ಬಾರ್ ಅವರು ನೆರವೇರಿಸಿದರು. ದೇವಾಲಯ ಸಂವರ್ಧನಾ ಪ್ರಮುಖ್ ಕೇಶವ ಪ್ರಸಾದ್ ಮುಳಿಯ ಅವರು ಹಿಂದೂ ಧಾರ್ಮಿಕ ಶಿಕ್ಷಣ ದ ಕುರಿತು ಪ್ರಾಸ್ತಾವಿಕ ಮಾತಾಡಿ ವಿದ್ಯಾರ್ಥಿಗಳಿಗೆ ಸುಜ್ಞಾನ ದೀಪಿಕೆ ಪುಸ್ತಕವನ್ನು ಹಸ್ತಾಂತರಿಸಿದರು.
ಅಧ್ಯಕ್ಷತೆ ವಹಿಸಿದ ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ
ಜಗನ್ನಾಥ ಪೂಜಾರಿ ಅವರು ಧಾರ್ಮಿಕ ಶಿಕ್ಷಣದ ಮಹತ್ವ ಕುರಿತು ಮಾತಾಡಿದರು.
ಕಾರ್ಯಕ್ರಮದಲ್ಲಿ ಕೇಂದ್ರದ ಸಂಯೋಜಕರಾದ ಶ್ವೇತಾ ಕಾನಾವು ಸ್ವಾಗತಿಸಿದರು. ಪೂರ್ಣಿಮಾ ಉಮೇಶ್ ವಂದಿಸಿದರು. ಕೇಂದ್ರದ ಸಂಯೋಜಕರಾದ ಅಶ್ವಿನಿ ಕೂಡಿಬೈಲು ಕಾರ್ಯಕ್ರಮ ನಿರೂಪಿಸಿದರು.


ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕರಾದ
ಕೃಷ್ಣವೇಣಿ ಪ್ರಸಾದ್ ಮುಳಿಯ ಅವರು ಶ್ಲೋಕದ ಅರ್ಥ ವಿವರಿಸಿ, ಭಜನೆ ಹಾಗೂ ಚಟುವಟಿಕೆ ಹೇಳಿಕೊಟ್ಟರು.
ಸಂಯೋಜಕರಾದ ಡಾ. ವಿಜಯಸರಸ್ವತಿ ಅವರು ಶ್ಲೋಕ ಅರ್ಥ ಹಾಗೂ ದೈನಂದಿನ ಜೀವನದ ಆಚಾರ ವಿಚಾರಗಳನ್ನು ವಿವರಿಸಿದರು.
ಸಂಯೋಜಕರಾದ ಶಂಕರಿ ಶರ್ಮ ಅವರು ಕಥೆ ಹಾಗೂ ಸದ್ವಿಚಾರವನ್ನು ಹೇಳಿಕೊಟ್ಟರು.
ಕಾರ್ಯಕ್ರಮದಲ್ಲಿ ಗಣ್ಯರು, ಸ್ಥಳೀಯ ಭಕ್ತಾದಿಗಳು , ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು