7:05 AM Thursday31 - July 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ… USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು… Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜು ಗ್ರಾಹಕ ವೇದಿಕೆ ಉದ್ಘಾಟನೆ

05/10/2024, 11:13

ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ (ಸ್ವಾಯತ್ತ) 2024-25 ಲನೇ ಸಾಲಿನ ಗ್ರಾಹಕ ಸರ್ಟಿಫಿಕೇಟ್ ಕೋರ್ಸ್ ನ ಗ್ರಾಹಕ ವೇದಿಕೆ ಉದ್ಘಾಟನೆ ನಡೆಯಿತು. ಕಾಲೇಜಿನ ಸ್ನಾತೋತ್ತರ ವಿಭಾಗದ ಸೆಮಿನಾರ್ ಹಾಲಿನಲ್ಲಿ ನಡೆದ ಈ ಕಾರ್ಯಕ್ರಮವನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶ ಹಾಗೂ ಜಿಲ್ಲಾ ಗ್ರಾಹಕ ಪರಿಹಾರ ವೇದಿಕೆಯ ಮಾಜಿ ಅಧ್ಯಕ್ಷ ಪ್ರಕಾಶ್ ಕೆ. ಅವರು ದೀಪ ಬೆಳಗಿ ಉದ್ಘಾಟಿಸಿದರು. ತಮ್ಮ ಭಾಷಣದಲ್ಲಿ ಅವರು ಭಾರತದಲ್ಲಿರುವ ಗ್ರಾಹಕ ಹಕ್ಕು, ಕರ್ತವ್ಯ, ಪರಿಹಾರ ಪಡೆಯುವ ಮಾರ್ಗ ಇತ್ಯಾದಿ ಎಲ್ಲದರ ಬಗೆಗೂ ಉದಾಹರಣೆಯೊಂದಿಗೆ ಮಾಹಿತಿಯನ್ನು ನೀಡಿದರು. ಉತ್ತಮ ಪರಿಹಾರಕ್ಕಾಗಿ ದಾಖಲೆಗಳೆಲ್ಲವನ್ನು ಹೊಂದಿರುವುದು ಅಗತ್ಯವಾಗಿರುತ್ತದೆ ಎಂದು ಹಲವಾರು ಗ್ರಾಹಕ ಸಂಬಂಧಿ ನ್ಯಾಯ ದಾನದ ಸಂದರ್ಭದ ಉದಾಹರಣೆಗಳೊಂದಿಗೆ ವಿವರಿಸಿದರು.


ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದ.ಕ.ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ, ಪತ್ರಕರ್ತರು, ಲೇಖಕ ರಾಯಿ ರಾಜಕುಮಾರ ಮೂಡುಬಿದಿರೆ ರವರು ಮಾತನಾಡಿ “ಗ್ರಾಹಕನೇ ರಾಜ” ಹೇಗೆ ಎಂಬುದನ್ನು ಹಲವಾರು ಸಾಂದರ್ಭಿಕ ಮಾಹಿತಿಗಳೊಂದಿಗೆ ವಿವರಿಸಿದರು. ಅಲ್ಲದೆ ಗ್ರಾಹಕ ಜಾಗರೂಕನಾಗಿದ್ದರೆ ತನ್ನ ಜವಾಬ್ದಾರಿಯೊಂದಿಗೆ ಹಕ್ಕನ್ನು ಸಾಧಿಸಬಹುದಾಗಿದೆ. ನ್ಯಾಯ, ನಿಷ್ಠೆ, ಪ್ರಾಮಾಣಿಕವಾಗಿ ವ್ಯವಹರಿಸಿದರೆ ಎಲ್ಲೆಡೆ ಬೆಲೆ, ಗೌರವ, ಶ್ರೇಷ್ಠತೆ ದೊರೆಯುತ್ತದೆ ಎಂದರು.
ಕಾಲೇಜಿನ ಪ್ರಾಚಾರ್ಯ ಡಾ. ಅಂತೋನಿ ಪ್ರಕಾಶ್ ಮೊಂತೆರೋ ಅವರು ಕಾರ್ಯಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಮಾರ್ಗದರ್ಶಕರಿಗಿಂತ ವಿದ್ಯಾರ್ಥಿಗಳು ಮುತುವರ್ಜಿ ವಹಿಸಿ ಕಾರ್ಯರೂಪಕ್ಕೆ ತಂದು ಕಾಲೇಜನ್ನು ಮಂಚೂಣಿಯಲ್ಲಿ ಕೊಂಡೊಯ್ಯಬೇಕೆಂದು ಕರೆಕೊಟ್ಟರು. ವೇದಿಕೆಯಲ್ಲಿ ಗ್ರಾಹಕ ಸಂಯೋಜಕ ಉಪನ್ಯಾಸಕರುಗಳಾದ ಪ್ರವೀಣ್ ಡಿ ಹಾಗೂ ಸ್ವಾತಿ ಶೆಟ್ಟಿ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಿಯಾಂಕ ಸ್ವಾಗತಿಸಿದರು. ಇಮ್ರಾನ್ ತಾಜ್ ಕಾರ್ಯಕ್ರಮ ನಿರ್ವಹಿಸಿದರು. ಬಾಸಿಲ್, ತನ್ವೀರ್ ಪಿಂಟೋ, ಲಿಖಿತ ಅತಿಥಿ ಗಳ ಪರಿಚಯ ಮಾಡಿಕೊಟ್ಟರು. ವಿಶ್ಮಿತ್ ಧನ್ಯವಾದ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು