6:15 PM Wednesday13 - May 2026
ಬ್ರೇಕಿಂಗ್ ನ್ಯೂಸ್
ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜು ಗ್ರಾಹಕ ವೇದಿಕೆ ಉದ್ಘಾಟನೆ

05/10/2024, 11:13

ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ (ಸ್ವಾಯತ್ತ) 2024-25 ಲನೇ ಸಾಲಿನ ಗ್ರಾಹಕ ಸರ್ಟಿಫಿಕೇಟ್ ಕೋರ್ಸ್ ನ ಗ್ರಾಹಕ ವೇದಿಕೆ ಉದ್ಘಾಟನೆ ನಡೆಯಿತು. ಕಾಲೇಜಿನ ಸ್ನಾತೋತ್ತರ ವಿಭಾಗದ ಸೆಮಿನಾರ್ ಹಾಲಿನಲ್ಲಿ ನಡೆದ ಈ ಕಾರ್ಯಕ್ರಮವನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶ ಹಾಗೂ ಜಿಲ್ಲಾ ಗ್ರಾಹಕ ಪರಿಹಾರ ವೇದಿಕೆಯ ಮಾಜಿ ಅಧ್ಯಕ್ಷ ಪ್ರಕಾಶ್ ಕೆ. ಅವರು ದೀಪ ಬೆಳಗಿ ಉದ್ಘಾಟಿಸಿದರು. ತಮ್ಮ ಭಾಷಣದಲ್ಲಿ ಅವರು ಭಾರತದಲ್ಲಿರುವ ಗ್ರಾಹಕ ಹಕ್ಕು, ಕರ್ತವ್ಯ, ಪರಿಹಾರ ಪಡೆಯುವ ಮಾರ್ಗ ಇತ್ಯಾದಿ ಎಲ್ಲದರ ಬಗೆಗೂ ಉದಾಹರಣೆಯೊಂದಿಗೆ ಮಾಹಿತಿಯನ್ನು ನೀಡಿದರು. ಉತ್ತಮ ಪರಿಹಾರಕ್ಕಾಗಿ ದಾಖಲೆಗಳೆಲ್ಲವನ್ನು ಹೊಂದಿರುವುದು ಅಗತ್ಯವಾಗಿರುತ್ತದೆ ಎಂದು ಹಲವಾರು ಗ್ರಾಹಕ ಸಂಬಂಧಿ ನ್ಯಾಯ ದಾನದ ಸಂದರ್ಭದ ಉದಾಹರಣೆಗಳೊಂದಿಗೆ ವಿವರಿಸಿದರು.


ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದ.ಕ.ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ, ಪತ್ರಕರ್ತರು, ಲೇಖಕ ರಾಯಿ ರಾಜಕುಮಾರ ಮೂಡುಬಿದಿರೆ ರವರು ಮಾತನಾಡಿ “ಗ್ರಾಹಕನೇ ರಾಜ” ಹೇಗೆ ಎಂಬುದನ್ನು ಹಲವಾರು ಸಾಂದರ್ಭಿಕ ಮಾಹಿತಿಗಳೊಂದಿಗೆ ವಿವರಿಸಿದರು. ಅಲ್ಲದೆ ಗ್ರಾಹಕ ಜಾಗರೂಕನಾಗಿದ್ದರೆ ತನ್ನ ಜವಾಬ್ದಾರಿಯೊಂದಿಗೆ ಹಕ್ಕನ್ನು ಸಾಧಿಸಬಹುದಾಗಿದೆ. ನ್ಯಾಯ, ನಿಷ್ಠೆ, ಪ್ರಾಮಾಣಿಕವಾಗಿ ವ್ಯವಹರಿಸಿದರೆ ಎಲ್ಲೆಡೆ ಬೆಲೆ, ಗೌರವ, ಶ್ರೇಷ್ಠತೆ ದೊರೆಯುತ್ತದೆ ಎಂದರು.
ಕಾಲೇಜಿನ ಪ್ರಾಚಾರ್ಯ ಡಾ. ಅಂತೋನಿ ಪ್ರಕಾಶ್ ಮೊಂತೆರೋ ಅವರು ಕಾರ್ಯಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಮಾರ್ಗದರ್ಶಕರಿಗಿಂತ ವಿದ್ಯಾರ್ಥಿಗಳು ಮುತುವರ್ಜಿ ವಹಿಸಿ ಕಾರ್ಯರೂಪಕ್ಕೆ ತಂದು ಕಾಲೇಜನ್ನು ಮಂಚೂಣಿಯಲ್ಲಿ ಕೊಂಡೊಯ್ಯಬೇಕೆಂದು ಕರೆಕೊಟ್ಟರು. ವೇದಿಕೆಯಲ್ಲಿ ಗ್ರಾಹಕ ಸಂಯೋಜಕ ಉಪನ್ಯಾಸಕರುಗಳಾದ ಪ್ರವೀಣ್ ಡಿ ಹಾಗೂ ಸ್ವಾತಿ ಶೆಟ್ಟಿ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಿಯಾಂಕ ಸ್ವಾಗತಿಸಿದರು. ಇಮ್ರಾನ್ ತಾಜ್ ಕಾರ್ಯಕ್ರಮ ನಿರ್ವಹಿಸಿದರು. ಬಾಸಿಲ್, ತನ್ವೀರ್ ಪಿಂಟೋ, ಲಿಖಿತ ಅತಿಥಿ ಗಳ ಪರಿಚಯ ಮಾಡಿಕೊಟ್ಟರು. ವಿಶ್ಮಿತ್ ಧನ್ಯವಾದ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು