2:24 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಪುತ್ತೂರು ನಿವಾಸಿಗೆ 2.37 ಲಕ್ಷ ರೂ. ಆನ್ ಲೈನ್ ವಂಚನೆ: ಕೃಷ್ಣರಾಜ ಪೇಟೆಯ ಆರೋಪಿ ಬಂಧನ

12/02/2026, 21:26

ಪುತ್ತೂರು(reporterkarnataka.com): ಆನ್ ಲೈನ್ ವಂಚನೆ ಪ್ರಕರಣ ಸಂಬಂಧಿಸಿದಂತೆ ಮಂಡ್ಯ ಕೃಷ್ಣರಾಜ ಪೇಟೆಯ ನಿವಾಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ನಿವಾಸಿ ಯಶೋಧರ ಎಂಬವರಿಗೆ ಅಪರಿಚಿತ ವ್ಯಕ್ತಿಯೋರ್ವ ವಿವಿಧ ಮೊಬೈಲ್‌ ನಂಬರ್ ಗಳಿಂದ ದೂರವಾಣಿ ಕರೆ ಮಾಡಿ, ತಾನು Insurance ಕಂಪೆನಿಯೊಂದರಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿ, Insurance ಮಾಡಿಸಿಕೊಡುವುದಾಗಿ ಹಾಗೂ ಆ ಬಗ್ಗೆ ಹಣ ಪಾವತಿಸುವಂತೆ ತಿಳಿಸಿರುತ್ತಾನೆ. ಈ ಬಗ್ಗೆ
ಪಿರ್ಯಾದಿದಾರರು ಯಶೋಧರ ನಿರಾಕರಿಸಿರುತ್ತಾರೆ. ಆ ಬಳಿಕ ಆರೊಪಿಯು ಇನ್ಸುರೆನ್ಸ್‌ ಕ್ಯಾನ್ಸಲ್‌ ಮಾಡುವುದಾಗಿ ತಿಳಿಸಿ, ಯಶೋಧರ ಅವರ Credit Card ನಂಬರ್‌ ಹಾಗೂ OTP ಪಡೆದು,ಯಶೋಧರರ Credit Card ನಿಂದ 2,37,036/- ಹಣವನ್ನು ಬೇರೆ ಖಾತೆಗೆ ವರ್ಗಾಯಿಸಿರುತ್ತಾನೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಅ.ಕ್ರ: 52/2025, U/S: 66(D) IT ACT & 318(4), 319(2) BNS ರಂತೆ ಪ್ರಕರಣ ದಾಖಲಿಸಲಾಗಿತ್ತು. ಈ ಕುರಿತು ತನಿಖೆ ನಡೆಸಿದ ಪೊಲೀಸರು ಮಹಾರಾಷ್ಟ ಮೂಲದ ಹಾಗೂ ಪ್ರಸ್ತುತ ಮಂಡ್ಯ ಕೃಷ್ಣರಾಜ ಪೇಟೆಯಲ್ಲಿ ವಾಸಿಸುತ್ತಿರುವ ಆರೋಪಿ ಅವಿನಾಶ್‌ ರಮೇಶ್‌ ಗೌಡ (24) ಎಂಬಾತನನ್ನು ಫೆ. 11ರಂದು ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನ ವಿಧಿಸಿರುವುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು