10:19 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಎನ್ ಸಿಸಿ ಘಟಕದಿಂದ ಅನಂದಾಶ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮ

25/11/2022, 12:21

ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಎನ್. ಸಿ.ಸಿ ಘಟಕ, ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಆನಂದಾಶ್ರಮ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಎನ್ ಸಿಸಿ ದಿನಾಚರಣೆಯ ಪ್ರಯುಕ್ತ ಆನಂದಾಶ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಆನಂದಾಶ್ರಮ ಸೇವಾ ಟ್ರಸ್ಟ್ ನ ಮುಖ್ಯ ಟ್ರಸ್ಟಿಯಾದ ಡಾ. ಗೌರಿ ಪೈ ಮಾತನಾಡಿ “ ಗಿಡ ನೆಡುವ ಮೂಲಕ ಪ್ರಕೃತಿಯನ್ನು ಸಂರಕ್ಷಿಸಿಲ್ಲಿ ದೇಶ ಸಮೃದ್ಧವಾಗುವುದು, ಯುವ ಜನರಲ್ಲಿ ಪರಿಸರ ಪ್ರೇಮ ಮೂಡಿಸುವ ಕೆಲಸವನ್ನು ಎನ್.ಸಿ.ಸಿ ಮಾಡುತ್ತಿದೆ. ಪರಿಸರ ಪ್ರೇಮ ಮಾತ್ರವಲ್ಲದೆ ಹೆತ್ತವರನ್ನು ಅವರ ವೃದ್ಧಾಪ್ಯದಲ್ಲಿ ಚೆನ್ನಾಗಿ ನೋಡಿಕೊಂಡು ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿದಾಗ ಮಾತ್ರವೇ ನಾವು ಉತ್ತಮ ಪ್ರಜೆಗಳಾಗುತ್ತೇವೆ. ವೃತ್ತಿಜೀವನ ಹಾಗೂ ಕೌಟುಂಬಿಕ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸುವುದು ಬಹಳ ಮುಖ್ಯವಾಗಿದೆ” ಎಂದು ಹೇಳಿದರು.

ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆ| ಜಾನ್ಸನ್ ಡೇವಿಡ್ ಸಿಕ್ವೆರಾರವರು ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ೭೫ನೇ .ಎನ್. .ಸಿ.ಸಿ ದಿನದ ಮಹತ್ವವನ್ನು ತಿಳಿಸಿದರು. ಸುಮಾರು 50 ಕ್ಕೂ ಹೆಚ್ಚಿನ ವಿವಿದ ಹಣ್ಣುಗಳ ಗಿಡಗಳನ್ನು ಆನಂದಾಶ್ರಮ ಪರಿಸರದಲ್ಲಿ ನೆಡಲಾಯಿತು. ಕಾಲೇಜಿನ ಎನ್ .ಸಿ.ಸಿ ಘಟಕಗಳ ವತಿಯಿಂದ ಆಶ್ರಮ ನಿವಾಸಿಗಳಿಗೆ ಅಕ್ಕಿ ಹಾಗೂ ಹಣ್ಣುಹಂಪಲುಗಳನ್ನು ನೀಡಲಾಯಿತು.

ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ಸಾತ್ವಿಕ್ ಡಿ. ಎನ್ ಸ್ವಾಗತಿಸಿ ಜ್ಯೂನಿಯರ್ ಅಂಡ‌ ಆಫೀಸರ್ ಕೆಲ್ವಿನ್ ಆಂಟನಿ ವಂದಿಸಿದರು. ಕೃತಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎನ್ .ಸಿ.ಸಿ ಘಟಕಗಳ 105 ಕೆಡೆಟ್ ಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು