12:33 AM Monday24 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಎನ್ ಸಿಸಿ ಘಟಕದಿಂದ ಅನಂದಾಶ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮ

25/11/2022, 12:21

ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಎನ್. ಸಿ.ಸಿ ಘಟಕ, ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಆನಂದಾಶ್ರಮ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಎನ್ ಸಿಸಿ ದಿನಾಚರಣೆಯ ಪ್ರಯುಕ್ತ ಆನಂದಾಶ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಆನಂದಾಶ್ರಮ ಸೇವಾ ಟ್ರಸ್ಟ್ ನ ಮುಖ್ಯ ಟ್ರಸ್ಟಿಯಾದ ಡಾ. ಗೌರಿ ಪೈ ಮಾತನಾಡಿ “ ಗಿಡ ನೆಡುವ ಮೂಲಕ ಪ್ರಕೃತಿಯನ್ನು ಸಂರಕ್ಷಿಸಿಲ್ಲಿ ದೇಶ ಸಮೃದ್ಧವಾಗುವುದು, ಯುವ ಜನರಲ್ಲಿ ಪರಿಸರ ಪ್ರೇಮ ಮೂಡಿಸುವ ಕೆಲಸವನ್ನು ಎನ್.ಸಿ.ಸಿ ಮಾಡುತ್ತಿದೆ. ಪರಿಸರ ಪ್ರೇಮ ಮಾತ್ರವಲ್ಲದೆ ಹೆತ್ತವರನ್ನು ಅವರ ವೃದ್ಧಾಪ್ಯದಲ್ಲಿ ಚೆನ್ನಾಗಿ ನೋಡಿಕೊಂಡು ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿದಾಗ ಮಾತ್ರವೇ ನಾವು ಉತ್ತಮ ಪ್ರಜೆಗಳಾಗುತ್ತೇವೆ. ವೃತ್ತಿಜೀವನ ಹಾಗೂ ಕೌಟುಂಬಿಕ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸುವುದು ಬಹಳ ಮುಖ್ಯವಾಗಿದೆ” ಎಂದು ಹೇಳಿದರು.

ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆ| ಜಾನ್ಸನ್ ಡೇವಿಡ್ ಸಿಕ್ವೆರಾರವರು ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ೭೫ನೇ .ಎನ್. .ಸಿ.ಸಿ ದಿನದ ಮಹತ್ವವನ್ನು ತಿಳಿಸಿದರು. ಸುಮಾರು 50 ಕ್ಕೂ ಹೆಚ್ಚಿನ ವಿವಿದ ಹಣ್ಣುಗಳ ಗಿಡಗಳನ್ನು ಆನಂದಾಶ್ರಮ ಪರಿಸರದಲ್ಲಿ ನೆಡಲಾಯಿತು. ಕಾಲೇಜಿನ ಎನ್ .ಸಿ.ಸಿ ಘಟಕಗಳ ವತಿಯಿಂದ ಆಶ್ರಮ ನಿವಾಸಿಗಳಿಗೆ ಅಕ್ಕಿ ಹಾಗೂ ಹಣ್ಣುಹಂಪಲುಗಳನ್ನು ನೀಡಲಾಯಿತು.

ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ಸಾತ್ವಿಕ್ ಡಿ. ಎನ್ ಸ್ವಾಗತಿಸಿ ಜ್ಯೂನಿಯರ್ ಅಂಡ‌ ಆಫೀಸರ್ ಕೆಲ್ವಿನ್ ಆಂಟನಿ ವಂದಿಸಿದರು. ಕೃತಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎನ್ .ಸಿ.ಸಿ ಘಟಕಗಳ 105 ಕೆಡೆಟ್ ಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು