9:24 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಎನ್ ಸಿಸಿ ಘಟಕದಿಂದ ಅನಂದಾಶ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮ

25/11/2022, 12:21

ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಎನ್. ಸಿ.ಸಿ ಘಟಕ, ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಆನಂದಾಶ್ರಮ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಎನ್ ಸಿಸಿ ದಿನಾಚರಣೆಯ ಪ್ರಯುಕ್ತ ಆನಂದಾಶ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಆನಂದಾಶ್ರಮ ಸೇವಾ ಟ್ರಸ್ಟ್ ನ ಮುಖ್ಯ ಟ್ರಸ್ಟಿಯಾದ ಡಾ. ಗೌರಿ ಪೈ ಮಾತನಾಡಿ “ ಗಿಡ ನೆಡುವ ಮೂಲಕ ಪ್ರಕೃತಿಯನ್ನು ಸಂರಕ್ಷಿಸಿಲ್ಲಿ ದೇಶ ಸಮೃದ್ಧವಾಗುವುದು, ಯುವ ಜನರಲ್ಲಿ ಪರಿಸರ ಪ್ರೇಮ ಮೂಡಿಸುವ ಕೆಲಸವನ್ನು ಎನ್.ಸಿ.ಸಿ ಮಾಡುತ್ತಿದೆ. ಪರಿಸರ ಪ್ರೇಮ ಮಾತ್ರವಲ್ಲದೆ ಹೆತ್ತವರನ್ನು ಅವರ ವೃದ್ಧಾಪ್ಯದಲ್ಲಿ ಚೆನ್ನಾಗಿ ನೋಡಿಕೊಂಡು ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿದಾಗ ಮಾತ್ರವೇ ನಾವು ಉತ್ತಮ ಪ್ರಜೆಗಳಾಗುತ್ತೇವೆ. ವೃತ್ತಿಜೀವನ ಹಾಗೂ ಕೌಟುಂಬಿಕ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸುವುದು ಬಹಳ ಮುಖ್ಯವಾಗಿದೆ” ಎಂದು ಹೇಳಿದರು.

ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆ| ಜಾನ್ಸನ್ ಡೇವಿಡ್ ಸಿಕ್ವೆರಾರವರು ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ೭೫ನೇ .ಎನ್. .ಸಿ.ಸಿ ದಿನದ ಮಹತ್ವವನ್ನು ತಿಳಿಸಿದರು. ಸುಮಾರು 50 ಕ್ಕೂ ಹೆಚ್ಚಿನ ವಿವಿದ ಹಣ್ಣುಗಳ ಗಿಡಗಳನ್ನು ಆನಂದಾಶ್ರಮ ಪರಿಸರದಲ್ಲಿ ನೆಡಲಾಯಿತು. ಕಾಲೇಜಿನ ಎನ್ .ಸಿ.ಸಿ ಘಟಕಗಳ ವತಿಯಿಂದ ಆಶ್ರಮ ನಿವಾಸಿಗಳಿಗೆ ಅಕ್ಕಿ ಹಾಗೂ ಹಣ್ಣುಹಂಪಲುಗಳನ್ನು ನೀಡಲಾಯಿತು.

ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ಸಾತ್ವಿಕ್ ಡಿ. ಎನ್ ಸ್ವಾಗತಿಸಿ ಜ್ಯೂನಿಯರ್ ಅಂಡ‌ ಆಫೀಸರ್ ಕೆಲ್ವಿನ್ ಆಂಟನಿ ವಂದಿಸಿದರು. ಕೃತಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎನ್ .ಸಿ.ಸಿ ಘಟಕಗಳ 105 ಕೆಡೆಟ್ ಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು