12:53 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಎನ್ ಸಿಸಿ ಘಟಕದಿಂದ ಅನಂದಾಶ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮ

25/11/2022, 12:21

ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಎನ್. ಸಿ.ಸಿ ಘಟಕ, ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಆನಂದಾಶ್ರಮ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಎನ್ ಸಿಸಿ ದಿನಾಚರಣೆಯ ಪ್ರಯುಕ್ತ ಆನಂದಾಶ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಆನಂದಾಶ್ರಮ ಸೇವಾ ಟ್ರಸ್ಟ್ ನ ಮುಖ್ಯ ಟ್ರಸ್ಟಿಯಾದ ಡಾ. ಗೌರಿ ಪೈ ಮಾತನಾಡಿ “ ಗಿಡ ನೆಡುವ ಮೂಲಕ ಪ್ರಕೃತಿಯನ್ನು ಸಂರಕ್ಷಿಸಿಲ್ಲಿ ದೇಶ ಸಮೃದ್ಧವಾಗುವುದು, ಯುವ ಜನರಲ್ಲಿ ಪರಿಸರ ಪ್ರೇಮ ಮೂಡಿಸುವ ಕೆಲಸವನ್ನು ಎನ್.ಸಿ.ಸಿ ಮಾಡುತ್ತಿದೆ. ಪರಿಸರ ಪ್ರೇಮ ಮಾತ್ರವಲ್ಲದೆ ಹೆತ್ತವರನ್ನು ಅವರ ವೃದ್ಧಾಪ್ಯದಲ್ಲಿ ಚೆನ್ನಾಗಿ ನೋಡಿಕೊಂಡು ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿದಾಗ ಮಾತ್ರವೇ ನಾವು ಉತ್ತಮ ಪ್ರಜೆಗಳಾಗುತ್ತೇವೆ. ವೃತ್ತಿಜೀವನ ಹಾಗೂ ಕೌಟುಂಬಿಕ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸುವುದು ಬಹಳ ಮುಖ್ಯವಾಗಿದೆ” ಎಂದು ಹೇಳಿದರು.

ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆ| ಜಾನ್ಸನ್ ಡೇವಿಡ್ ಸಿಕ್ವೆರಾರವರು ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ೭೫ನೇ .ಎನ್. .ಸಿ.ಸಿ ದಿನದ ಮಹತ್ವವನ್ನು ತಿಳಿಸಿದರು. ಸುಮಾರು 50 ಕ್ಕೂ ಹೆಚ್ಚಿನ ವಿವಿದ ಹಣ್ಣುಗಳ ಗಿಡಗಳನ್ನು ಆನಂದಾಶ್ರಮ ಪರಿಸರದಲ್ಲಿ ನೆಡಲಾಯಿತು. ಕಾಲೇಜಿನ ಎನ್ .ಸಿ.ಸಿ ಘಟಕಗಳ ವತಿಯಿಂದ ಆಶ್ರಮ ನಿವಾಸಿಗಳಿಗೆ ಅಕ್ಕಿ ಹಾಗೂ ಹಣ್ಣುಹಂಪಲುಗಳನ್ನು ನೀಡಲಾಯಿತು.

ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ಸಾತ್ವಿಕ್ ಡಿ. ಎನ್ ಸ್ವಾಗತಿಸಿ ಜ್ಯೂನಿಯರ್ ಅಂಡ‌ ಆಫೀಸರ್ ಕೆಲ್ವಿನ್ ಆಂಟನಿ ವಂದಿಸಿದರು. ಕೃತಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎನ್ .ಸಿ.ಸಿ ಘಟಕಗಳ 105 ಕೆಡೆಟ್ ಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು