3:30 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಎನ್ ಸಿಸಿ ಘಟಕದಿಂದ ಅನಂದಾಶ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮ

25/11/2022, 12:21

ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಎನ್. ಸಿ.ಸಿ ಘಟಕ, ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಆನಂದಾಶ್ರಮ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಎನ್ ಸಿಸಿ ದಿನಾಚರಣೆಯ ಪ್ರಯುಕ್ತ ಆನಂದಾಶ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಆನಂದಾಶ್ರಮ ಸೇವಾ ಟ್ರಸ್ಟ್ ನ ಮುಖ್ಯ ಟ್ರಸ್ಟಿಯಾದ ಡಾ. ಗೌರಿ ಪೈ ಮಾತನಾಡಿ “ ಗಿಡ ನೆಡುವ ಮೂಲಕ ಪ್ರಕೃತಿಯನ್ನು ಸಂರಕ್ಷಿಸಿಲ್ಲಿ ದೇಶ ಸಮೃದ್ಧವಾಗುವುದು, ಯುವ ಜನರಲ್ಲಿ ಪರಿಸರ ಪ್ರೇಮ ಮೂಡಿಸುವ ಕೆಲಸವನ್ನು ಎನ್.ಸಿ.ಸಿ ಮಾಡುತ್ತಿದೆ. ಪರಿಸರ ಪ್ರೇಮ ಮಾತ್ರವಲ್ಲದೆ ಹೆತ್ತವರನ್ನು ಅವರ ವೃದ್ಧಾಪ್ಯದಲ್ಲಿ ಚೆನ್ನಾಗಿ ನೋಡಿಕೊಂಡು ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿದಾಗ ಮಾತ್ರವೇ ನಾವು ಉತ್ತಮ ಪ್ರಜೆಗಳಾಗುತ್ತೇವೆ. ವೃತ್ತಿಜೀವನ ಹಾಗೂ ಕೌಟುಂಬಿಕ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸುವುದು ಬಹಳ ಮುಖ್ಯವಾಗಿದೆ” ಎಂದು ಹೇಳಿದರು.

ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆ| ಜಾನ್ಸನ್ ಡೇವಿಡ್ ಸಿಕ್ವೆರಾರವರು ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ೭೫ನೇ .ಎನ್. .ಸಿ.ಸಿ ದಿನದ ಮಹತ್ವವನ್ನು ತಿಳಿಸಿದರು. ಸುಮಾರು 50 ಕ್ಕೂ ಹೆಚ್ಚಿನ ವಿವಿದ ಹಣ್ಣುಗಳ ಗಿಡಗಳನ್ನು ಆನಂದಾಶ್ರಮ ಪರಿಸರದಲ್ಲಿ ನೆಡಲಾಯಿತು. ಕಾಲೇಜಿನ ಎನ್ .ಸಿ.ಸಿ ಘಟಕಗಳ ವತಿಯಿಂದ ಆಶ್ರಮ ನಿವಾಸಿಗಳಿಗೆ ಅಕ್ಕಿ ಹಾಗೂ ಹಣ್ಣುಹಂಪಲುಗಳನ್ನು ನೀಡಲಾಯಿತು.

ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ಸಾತ್ವಿಕ್ ಡಿ. ಎನ್ ಸ್ವಾಗತಿಸಿ ಜ್ಯೂನಿಯರ್ ಅಂಡ‌ ಆಫೀಸರ್ ಕೆಲ್ವಿನ್ ಆಂಟನಿ ವಂದಿಸಿದರು. ಕೃತಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎನ್ .ಸಿ.ಸಿ ಘಟಕಗಳ 105 ಕೆಡೆಟ್ ಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು