1:01 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನ

21/11/2022, 23:46

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಸ್ಟಾಫ್ ಅಸೋಸಿಯೇಷನ್ ವತಿಯಿಂದ ತಮ್ಮ ವ್ಯಕ್ತಿಜೀವನದ 35 ವರ್ಷಗಳ ಸೇವೆಯನ್ನು ಪೂರ್ತಿಗೊಳಿಸಿ ನಿವೃತ್ತಿ ಹೊಂದಿರುವ ಕಾಲೇಜಿನ ಉಪಪ್ರಾಂಶುಪಾಲರೂ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರೂ ಆದ ಪ್ರೊ. ಉದಯ ಕೆ. ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಅತಿ ವಂ. ಲಾರೆನ್ಸ್ ಮಸ್ಕರೇನ್‌ರವರು ಶಿಸ್ತು, ಸಮಯ ಪರಿಪಾಲನೆ, ಕರ್ತವ್ಯನಿಷ್ಠೆ ಮುಂತಾದ ಗುಣಗಳೇ ಶಿಕ್ಷಕರನ್ನು ಬಹಳ ಎತ್ತರಕ್ಕೆ ಕೊಂಡೊಯ್ಯಬಲ್ಲವು. ತಮಗೆ ಸಿಕ್ಕಿದ ಸಮಯ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳ ಪ್ರೀತಿಯನ್ನು ಗಳಿಸಿದ ಇವರ ಮುಂದಿನ ಜೀವನ ಸುಖ, ಶಾಂತಿ ಹಾಗೂ ನೆಮ್ಮದಿಯಿಂದ ಕೂಡಿರಲಿ” ಎಂದು ಹಾರೈಸಿದರು.


ಕಾಲೇಜಿನ ಪ್ರಾಂಶುಪಾಲರಾದ ವಂ, ಡಾ| ಆಂಟನಿ ಪ್ರಕಾಶ್ ಮೊಂತೆರೋ ಅವರು ಪ್ರೊ| ಉದಯರವರು ಸಂಸ್ಥೆಗೆ ಮಾಡಿರುವ ಸೇವೆಯನ್ನು ಪ್ರಶಂಸಿಸಿ ಅವರಿಗೆ ಶುಭಹಾರೈಸಿದರು.

ಕಾಲೇಜಿನ ಉಪಪ್ರಾಂಶುಪಾಲರೂ ಗಣಿತ ವಿಭಾಗದ ಮುಖ್ಯಸ್ಥರೂ ಆದ ಪ್ರೊ| ಗಣೇಶ್ ಭಟ್‌’ರವರು ಪ್ರೊ| ಉದಯರವರೊಂದಿಗಿನ ತಮ್ಮ ಒಡನಾಟದ ನೆನಪುಗಳನ್ನು ಹಂಚಿಕೊಂಡು ಸನ್ಮಾನಪತ್ರವನ್ನು ವಾಚಿಸಿದರು. ನಂತರ ಮಾತನಾಡಿದ ಪ್ರೊ| ಉದಯದವರು ತಮ್ಮ ಸುದೀರ್ಘ ವೃತ್ತಿಜೀವನದ ನೆನಪುಗಳನ್ನು ಹಂಚಿಕೊಂಡು ತಮ್ಮ ವೃತ್ತಿಜೀವನದುದ್ದಕ್ಕೂ ಮಾರ್ಗದರ್ಶನವಿತ್ತ ಪ್ರಾಂಶುಪಾಲರುಗಳು ಹಾಗೂ ಸಹೋದ್ಯೋಗಿಗಳಿಗೆ ಕೃತಜ್ಞತೆ ಅರ್ಪಿಸಿದರು.

ಸುರಕ್ಷಾ ಮತ್ತು ಬಳಗ ಪ್ರಾರ್ಥಿಸಿದರು. ಸ್ಟಾಫ್ ಅಸೋಸಿಯೇಶನ್‌ನ ಕಾರ್ಯದರ್ಶಿಯಾದ ಡಾ. ಡಿಂಪಲ್ ಫೆರ್ನಾಂಡಿಸ್ ಸ್ವಾಗತಿಸಿದರು. ಸ್ಟಾಫ್ ಅಸೋಸಿಯೆಶನ್‌ ಅಧ್ಯಕ್ಷರಾದ ಪ್ರೊ| ಸುಬೈ‌ರ್ ವಂದಿಸಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರ್ಷಿತ್‌ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಎ. ಪಿ. ರಾಧಾಕೃಷ್ಣ ಹಾಗೂ ಕ್ಯಾಂಪ‌ ನಿರ್ದೇಶಕರಾದ ವಂ| ಸ್ಟ್ಯಾನಿ ಪಿಂಟೋ ವೇದಿಕೆಯಲ್ಲಿ ಉ ಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು