12:35 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನ

21/11/2022, 23:46

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಸ್ಟಾಫ್ ಅಸೋಸಿಯೇಷನ್ ವತಿಯಿಂದ ತಮ್ಮ ವ್ಯಕ್ತಿಜೀವನದ 35 ವರ್ಷಗಳ ಸೇವೆಯನ್ನು ಪೂರ್ತಿಗೊಳಿಸಿ ನಿವೃತ್ತಿ ಹೊಂದಿರುವ ಕಾಲೇಜಿನ ಉಪಪ್ರಾಂಶುಪಾಲರೂ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರೂ ಆದ ಪ್ರೊ. ಉದಯ ಕೆ. ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಅತಿ ವಂ. ಲಾರೆನ್ಸ್ ಮಸ್ಕರೇನ್‌ರವರು ಶಿಸ್ತು, ಸಮಯ ಪರಿಪಾಲನೆ, ಕರ್ತವ್ಯನಿಷ್ಠೆ ಮುಂತಾದ ಗುಣಗಳೇ ಶಿಕ್ಷಕರನ್ನು ಬಹಳ ಎತ್ತರಕ್ಕೆ ಕೊಂಡೊಯ್ಯಬಲ್ಲವು. ತಮಗೆ ಸಿಕ್ಕಿದ ಸಮಯ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳ ಪ್ರೀತಿಯನ್ನು ಗಳಿಸಿದ ಇವರ ಮುಂದಿನ ಜೀವನ ಸುಖ, ಶಾಂತಿ ಹಾಗೂ ನೆಮ್ಮದಿಯಿಂದ ಕೂಡಿರಲಿ” ಎಂದು ಹಾರೈಸಿದರು.


ಕಾಲೇಜಿನ ಪ್ರಾಂಶುಪಾಲರಾದ ವಂ, ಡಾ| ಆಂಟನಿ ಪ್ರಕಾಶ್ ಮೊಂತೆರೋ ಅವರು ಪ್ರೊ| ಉದಯರವರು ಸಂಸ್ಥೆಗೆ ಮಾಡಿರುವ ಸೇವೆಯನ್ನು ಪ್ರಶಂಸಿಸಿ ಅವರಿಗೆ ಶುಭಹಾರೈಸಿದರು.

ಕಾಲೇಜಿನ ಉಪಪ್ರಾಂಶುಪಾಲರೂ ಗಣಿತ ವಿಭಾಗದ ಮುಖ್ಯಸ್ಥರೂ ಆದ ಪ್ರೊ| ಗಣೇಶ್ ಭಟ್‌’ರವರು ಪ್ರೊ| ಉದಯರವರೊಂದಿಗಿನ ತಮ್ಮ ಒಡನಾಟದ ನೆನಪುಗಳನ್ನು ಹಂಚಿಕೊಂಡು ಸನ್ಮಾನಪತ್ರವನ್ನು ವಾಚಿಸಿದರು. ನಂತರ ಮಾತನಾಡಿದ ಪ್ರೊ| ಉದಯದವರು ತಮ್ಮ ಸುದೀರ್ಘ ವೃತ್ತಿಜೀವನದ ನೆನಪುಗಳನ್ನು ಹಂಚಿಕೊಂಡು ತಮ್ಮ ವೃತ್ತಿಜೀವನದುದ್ದಕ್ಕೂ ಮಾರ್ಗದರ್ಶನವಿತ್ತ ಪ್ರಾಂಶುಪಾಲರುಗಳು ಹಾಗೂ ಸಹೋದ್ಯೋಗಿಗಳಿಗೆ ಕೃತಜ್ಞತೆ ಅರ್ಪಿಸಿದರು.

ಸುರಕ್ಷಾ ಮತ್ತು ಬಳಗ ಪ್ರಾರ್ಥಿಸಿದರು. ಸ್ಟಾಫ್ ಅಸೋಸಿಯೇಶನ್‌ನ ಕಾರ್ಯದರ್ಶಿಯಾದ ಡಾ. ಡಿಂಪಲ್ ಫೆರ್ನಾಂಡಿಸ್ ಸ್ವಾಗತಿಸಿದರು. ಸ್ಟಾಫ್ ಅಸೋಸಿಯೆಶನ್‌ ಅಧ್ಯಕ್ಷರಾದ ಪ್ರೊ| ಸುಬೈ‌ರ್ ವಂದಿಸಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರ್ಷಿತ್‌ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಎ. ಪಿ. ರಾಧಾಕೃಷ್ಣ ಹಾಗೂ ಕ್ಯಾಂಪ‌ ನಿರ್ದೇಶಕರಾದ ವಂ| ಸ್ಟ್ಯಾನಿ ಪಿಂಟೋ ವೇದಿಕೆಯಲ್ಲಿ ಉ ಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು