2:02 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣು: ಇನ್ನೋರ್ವ ಪರಾರಿ

07/11/2023, 11:46

ಪುತ್ತೂರು(reporterkarnataka.com): ಇಲ್ಲಿನ ನೆಹರೂ ನಗರದಲ್ಲಿ ನಡೆದ ಕಲ್ಲೇಗ ಟೈಗರ್ಸ್ ಹುಲಿ ವೇಷ ತಂಡದ ಸಾರಥಿ ಅಕ್ಷಯ್ ಕಲ್ಲೇಗ(24) ಅಮಾನುಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ.
ಕಲ್ಲೇಗ ಟೈಗರ್ಸ್ ಎಂಬ ಹುಲಿ ಮೇಷ ತಂಡವನ್ನು ಮುನ್ನಡೆಸುತ್ತಿದ್ದ ಅಕ್ಷಯ್ ಕಲ್ಲೇಗ ಅವರನ್ನು ತಲವಾರಿನಿಂದ ಕಡಿದು ಹತ್ಯೆ ಮಾಡಲಾಗಿತ್ತು. ನೆಹರೂ ನಗರದಿಂದ ವಿವೇಕಾನಂದ ಕಾಲೇಜಿಗೆ ಹೋಗುವ ರಸ್ತೆಯಲ್ಲಿ ಎಟಿಎಂ ಎದುರು ಅಕ್ಷಯ್ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ್ದರು. ಅಕ್ಷಯ್ ಅವರನ್ನು ಅಟ್ಟಾಡಿಸಿಕೊಂಡು ಹೋಗಿ ತಲವಾರಿನಿಂದ ಕಡಿದು ಕೊಲೆ ಮಾಡಲಾಗಿತ್ತು. ಸೋಮವಾರ ತಡರಾತ್ರಿ ಈ ಕೃತ್ಯ ನಡೆಸಲಾಗಿತ್ತು.
ಅಕ್ಷಯ್ ತಂಡ ಹುಲಿ ಮೇಷದಲ್ಲಿ ಬಹಳಷ್ಟು ಜನಪ್ರಿಯತೆ ಗಳಿಸಿತ್ತು. ಪಿಲಿರಂಗ್ ಮತ್ತು ಪಿಲಿಗೊಬ್ಬು ಈ ಎರಡೂ ಸ್ಪರ್ಧೆಯಲ್ಲಿ ಅಕ್ಷಯ್ ತಂಡ ಪ್ರಶಸ್ತಿ ಪಡೆದಿತ್ತು. ಇದೀಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮನೀಶ್ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ. ಇನ್ನೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು