11:00 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಪುತ್ತೂರು: ಮನೆ ಮೇಲೆ ತಡೆಗೋಡೆ ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಿಸಿದ ತಂದೆ

27/06/2024, 12:24

ಪುತ್ತೂರು(reporterkarnataka.com): ದ.ಕ.ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಕಾರಣ ಪುತ್ತೂರಿನಲ್ಲಿ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದು, ಅದೃಷ್ಟವಶಾತ್ ಮಕ್ಕಳನ್ನು ರಕ್ಷಿಸಲಾಗಿದೆ. ಉಳ್ಳಾಲ ಸಮೀಪದ ಮದನಿನಗರದಲ್ಲಿ ದುರಂತ ನಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ.
ಪುತ್ತೂರು ಸಮೀಪದ ಬನ್ನೂರು ಬಳಿಯ ಜೈನರಗುರಿ ಎಂಬಲ್ಲಿನ ಮಜೀದ್ ಎಂಬವರ ಮನೆಯ ಮೇಲೆ ಗುರುವಾರ ಮುಂಜಾನೆ ಗೋಡೆ ಕುಸಿದು ಬಿದ್ದಿದೆ.
ತಡೆಗೋಡೆ ಬಿದ್ದ ಪರಿಣಾಮ ಮನೆಯ ಅರ್ಧಭಾಗ ಕುಸಿದು ಮಜೀದ್ ಹಾಗೂ ಇಬ್ಬರು ಮಲಗಿದ್ದ ಕೊಠಡಿ ಮೇಲೆಯೇ ಬಿದ್ದಿದೆ. ತಕ್ಷಣ ಎಚ್ಚೆತ್ತ ಮಜೀದ್ ಅವರು ಮಣ್ಣಿನಡಿ ಸಿಲುಕಿದ್ದ ಮಕ್ಕಳಿಬ್ಬರನ್ನು ಪಾರು ಮಾಡಿದ್ದಾರೆ‌. ತಡೆಗೋಡೆ ಮಣ್ಣು ತೆರವು ಕಾರ್ಯಾಚರಣೆ ನಡೆದಿದೆ. ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕುತ್ತಾರು ಮದನಿನಗರದಲ್ಲಿ ನಿನ್ನೆ ಕಂಪೌಂಡ್ ಕುಸಿದು ಮನೆಯ ಮೇಲೆಯೇ ಬಿದ್ದು ನಾಲ್ವರು ಮೃತಪಟ್ಟ ಘಟನೆಯ ನೆನಪು ಮರೆಯುವ ಮುನ್ನವೇ

ಇತ್ತೀಚಿನ ಸುದ್ದಿ

ಜಾಹೀರಾತು