6:29 PM Tuesday26 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಪುತ್ತೂರು: ನವೆಂಬರ್ 30ರಂದು ಸಹಕಾರಿ ಸಂಘಗಳ ಹಾಗೂ ನವೋದಯ ಸ್ವ ಸಹಾಯ ಸಂಘಗಳ ಸದಸ್ಯರ ಜಿಲ್ಲಾಮಟ್ಟದ ಕ್ರೀಡಾಕೂಟ

28/11/2023, 19:00

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಸಂಘ, ನವೋದಯ ಗ್ರಾಮ ವಿಕಾಸ ಟ್ರಸ್ಟ್ ನ ಸಹಭಾಗಿತತ್ವದಲ್ಲಿ ಜಿಲ್ಲೆಯ ಎಲ್ಲ ಸಹಕಾರಿ ಸಂಘಗಳ ಹಾಗೂ ನವೋದಯ ಸ್ವ ಸಹಾಯ ಸಂಘಗಳ ಸದಸ್ಯರ ಜಿಲ್ಲಾಮಟ್ಟದ ಕ್ರೀಡಾಕೂಟ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ನವಬರ್ 30ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ.


ಗ್ರಾಮೀಣಾಭಿವೃದ್ಧಿಯ ಮೂಲ ಸೆಲೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸಹಕಾರಿ ಸಂಘಗಳು ಹಾಗೂ ಗ್ರಾಮೀಣ ಮಟ್ಟದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡುವ ನವೋದಯ ಸ್ವ ಸಹಾಯ ಸಂಘಗಳ ಸದಸ್ಯರುಗಳ ಕ್ರೀಡಾ ವಿಕಸನಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿಧ. ಕ್ರೀಡಾಕೂಟದಲ್ಲಿ ಮಹಿಳೆಯರು ಹಾಗೂ ಪುರುಷರಿಗೆ 100 ಮೀಟರ್ ಓಟ, ಗುಂಡು ಎಸೆತ ಹಾಗೂ ಹಗ್ಗ ಜಗ್ಗಾಟ ಸ್ಪರ್ಧೆ ಗಳು ನಡೆಯಲಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎನ್.ಎಂ. ರಾಜೇಂದ್ರ ಕುಮಾರ್ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಹಕಾರಿ ಸಂಘಗಳ ಸದಸ್ಯರು, ಸಿಬ್ಬಂದಿಗಳು, ನವೋದಯ ಸ್ವ ಸಹಾಯ ಸಂಘ ಸದಸ್ಯರು ಹಾಗೂ ಪ್ರೇರಕರು ಮತ್ರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಿಬ್ಬಂದಿ ವರ್ಗ ಒಳಗೊಂಡಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಕ್ರೀಡಾಪಟುಗಳು ಈ ಸ್ಪರ್ಧೆ ಯಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡುವರು. ಕ್ರೀಡಾ ಸಚಿವ ಆರ್. ಬಿ. ತಿಮ್ಮಾಪುರ ಕ್ರೀಡಾಜ್ಯೋತಿ ಬೆಳಗಿಸುವರು. ಸಂಸದ ನಳಿನ್ ಕುಮಾರ್ ಕಟೀಲ್ ಮೆರವಣಿಗೆ ಯನ್ನು ಉದ್ಘಾಟಿದುವರು ಎಂದು ಡಾ. ರಾಜೇಂದ್ರ ಕುಮಾರ್ ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಸಮಾರೋಪ: ಕ್ರೀಡಾಕೂಟದ ಸಮಾರೋಪ ಸಮಾರಂಭ ಸಂಜೆ 4 ಗಂಟೆಗೆ ನಡೆಯಲಿದೆ. ಪುತ್ತೂರು ಆದರ್ಶ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ವಿತರಿಸುವರು.
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸಹಕಾರಿ ಯೂನಿಯನ್ ನ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಪುತ್ತೂರು ರಾಮಕೃಷ್ಣ ಸರಕಾರಿ ಪ್ರೌಢಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ನಗರಸಭೆ ಮಾಜಿ ಅಧ್ಯಕ್ಷ ಜೀವಂಧರ್ ಜೈನ್ ಹಾಗೂ ಪುತ್ತೂರು ನಗರಸಭೆ ಸದಸ್ಯ ಜಗನ್ನಿವಾಸ್ ರಾವ್ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು