10:17 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪುತ್ತೂರು: ಒಳಿತು ಮಾಡು ಮನುಷ್ಯ ತಂಡದ 19ನೇ ಕಾರ್ಯಕ್ರಮ; 56 ಸಾವಿರ ಮೊತ್ತದ ಆಹಾರ ಕಿಟ್ ವಿತರಣೆ

30/12/2022, 21:04

ಪುತ್ತೂರು(reporterkarnataka.com): ಇಲ್ಲಿನ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಸಕ್ಷಮ ಪುತ್ತೂರು ಘಟಕದ ಸಹಯೋಗದೊಂದಿಗೆ ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 19ನೇ ಯೋಜನೆ ‘ಒಳಿತು ಮಾಡು ಮನುಷ’ ಕಾರ್ಯಕ್ರಮ ಶುಕ್ರವಾರ ಪುತ್ತೂರಿನ ” ಅನುರಾಗ ವಠಾರ”ದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬೆಟ್ಟಂಪಾಡಿ ನವೋದಯ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಶರತ್ ಕುಮಾರ್ ಮಾತನಾಡಿ,
ಸೇವೆ ಎಂಬ ಯಜ್ಞದಲ್ಲಿ ಸಮಿತೆಯಂತೆ ಉರಿಯಬೇಕು ಎಂದು ಹಿರಿಯರು ತಿಳಿಸಿಕೊಟ್ಟಿದ್ದಾರೆ. ಜನರು ಸೇವೆ ಮಾಡುವ ಮೂಲಕ ಒಳಿತು ಮಾಡು ಮಾನುಷ ಸಹಾಯ ಸೇವಾ ನಿಧಿ ಟ್ರಸ್ಟ್ ಇದೆ ಕಾರ್ಯವನ್ನು ಮಾಡುತ್ತಿದೆ. ಯಾವುದೇ ಸಂಘಟನೆಗಳ ಸಹಯೋಗ ಇಲ್ಲದೆ,ಸೇವೆ ಮಾಡುತ್ತಿದೆ.ಇನಷ್ಟು ಉತ್ತಮ ಕಾರ್ಯಗಳನ್ನು ಮಾಡುವಂತ ಗಲಿ ಎಂದು ಶುಭ ಹಾರೈಸಿದರು
ಇನೋರ್ವ ಮುಖ್ಯ ಅತಿಥಿ ನಗರಸಭೆ ಮಾಜಿ ಅಧ್ಯಕ್ಷ ಲೋಕೇಶ್ ಹೆಗ್ಡೆ ಮಾತನಾಡಿ, ಬಲಗೈಯಲ್ಲಿ ಕೊಟ್ಟದ್ದು ಎಡಕೈಗೆ ಗೊತ್ತಾಗಬಾರದು ಎಂದು ಹೇಳುತ್ತಾರೆ. ಪ್ರಚಾರವಿಲ್ಲದೆ ಮಾಡುವ ಕಾರ್ಯಕ್ರಮಗಳಿಂದ ಸಮಾಜ ಕಲ್ಯಾಣ ಆಗಲು ಪೂರಕ. ಇಂತಹ ಕಾರ್ಯಕ್ರಮ ದೇವರು ಮೆಚ್ಚುವ ಕಾರ್ಯ ಎಂದರು.


ಕಾರ್ಯಕ್ರಮದಲ್ಲಿ 56,000 ಸಾವಿರ ಮೊತ್ತದ 56 ಆಹಾರ ಕಿಟ್ ವಿತರಣೆ ಮಾಡಲಾಯಿತು ಹಾಗೂ 60 ಜನರಿಗೆ ಬಿಪಿ, ಸುಗರ್ ತಪಾಸಣೆ ಮಾಡಲಾಯ್ತು.ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಗಳದ ಕಲಾವಿದ ಕೃಷ್ಣಪ್ಪ ಶಿವಾನಗರ, ಚೇತನ್ ಕುಮಾರ್ ಪುತ್ತೂರು, ಶೋಭಾ ಮಡಿವಾಳ ಹಾಗೂ ಯೋಜನಾಧಿಕಾರಿ ಸೌಜನ್ಯ ಆರ್ಲಪದವು ಹಾಜರಿದ್ದರು.
ಪ್ರಾರ್ಥನೆಯನ್ನು ಮಾಲಿನಿ, ಹರ್ಷಿತಾ, ಮಮತಾ, ಸ್ವಾಗತವನ್ನು ಶೀಲಾ, ಧನ್ಯವಾದವನ್ನು ಶೃತಿಕಾ ಹಾಗೂ ಶುಭಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು