9:04 PM Friday23 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿಗೆ ನ್ಯಾಕ್‌ ನಿಂದ ಎ ಗ್ರೇಡ್ ಮಾನ್ಯತೆ

13/01/2023, 11:10

ಮಾಧ್ಯಮ ಪ್ರಕಟಣೆ
ಪುತ್ತೂರು ಸಂತ ಫಿಲೋಮಿನಾ ಕಾಲೇಜಿಗೆ ನ್ಯಾಕ್‌ ನಿಂದ ಎ ಗ್ರೇಡ್ ಮಾನ್ಯತೆ ಪಡೆದಿದೆ.ಮೌಲ್ಯಾಂಕನ ಹಾಗೂ ಶ್ರೇಣೀಕರಣಕ್ಕಾಗಿ ಇಲ್ಲಿನ
ಸಂತ ಫಿಲೋಮಿನಾ ಕಾಲೇಜು ಕಳೆದ ಸಪ್ಟೆಂಬರ್ ತಿಂಗಳಲ್ಲಿ ನ್ಯಾಕ್ ಸಂಸ್ಥೆಗೆ ಸಲ್ಲಿಸಿದ ಸ್ವ ಅಧ್ಯಯನ ವರದಿಯ ಮೌಲ್ಯಮಾಪನಕ್ಕಾಗಿ ನ್ಯಾಕ್ ಸಂಸ್ಥೆಯಿಂದ ನಿಯೋಜಿಸಲ್ಪಟ್ಟ ತ್ರಿ ಸದಸ್ಯ ತಂಡವೊಂದು ಜನವರಿ 4 ಮತ್ತು 5 ರಂದು ಕಾಲೇಜಿಗೆ ಭೇಟಿನೀಡಿತ್ತು. ತಂಡದ ಅಧ್ಯಕ್ಷರಾದ ಉತ್ತರ ಪ್ರದೇಶದ ಮಹರ್ಷಿ ಮಾಹಿತಿ ತಂತ್ರಜ್ಞಾನ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿಗಳೂ ಹಾಗೂ ಪ್ರಸ್ತುತ ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರೂ ಆದ ಡಾ. ಎಚ್‌.ಕೆ.ಸಿಂಗ್‌, ಸದಸ್ಯ ಸಂಯೋಜಕರಾದ ಹರಿಯಾಣದಲ್ಲಿ ಕುರುಕ್ಷೇತ್ರ ವಿಶ್ವವಿದ್ಯಾನಿಲಯದ ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಪವನ್ ಕುಮಾರ್ ಶರ್ಮ ಸದಸ್ಯರಾದ ಡಾ. ಸಂತೋಶ್ ಕೋಠಿ, ಪ್ರಾಂಶುಪಾಲರು ವಾಲ್‌ಚಂದ್ ಕಲಾ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜು ಸೋಲಾಪುರ ಇವರುಗಳನ್ನು ಕಾಲೇಜಿನ ಎನ್ ಸಿಸಿ ಆರ್ಮಿ ಮತ್ತು ನೇವಿಯ ಸದಸ್ಯರ ಗೌರವವಂದನೆಯೊಂದಿಗೆ ಸ್ವಾಗತಿಸಲಾಯಿತು. ತಂಡವು ಕಾಲೇಜಿನ ಪ್ರಾಂಶುಪಾಲರು, ಐಕ್ಯೂಎಸಿ ಸಂಯೋಜಕರು, ಆಡಳಿತ ಮಂಡಳಿಯ ಸದಸ್ಯರು, ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಆಡಳಿತ ಸಿಬ್ಬಂದಿ, ವಿದ್ಯಾರ್ಥಿಗಳು, ಹತ್ತವರು, ಹಿರಿಯ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿತು. ಕಾಲೇಜು ಸ್ವ-ಅಧ್ಯಯನ ವರದಿಯಲ್ಲಿ ಉಲ್ಲೇಖಿಸಿದ ಹಲವಾರು ಅಂಶಗಳ ಬಗ್ಗೆ ಪರಿಶೀಲನೆ ನಡೆಸಿತು. ಈ ಸಂದರ್ಭದಲ್ಲಿ ಕಾಲೇಜಿನ ಯಕ್ಷಕಲಾಕೇಂದ್ರ ಹಾಗೂ ವಿದ್ಯಾರ್ಥಿ ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

ಜನವರಿ 5 ರಂದು ಕಾಲೇಜಿನ ಹಲವಾರು ಕ್ರಿಯಾತ್ಮಕ ಘಟಕಗಳಿಗೆ ಭೇಟಿ ನೀಡಿದ ನಂತರ ಉಪನ್ಯಾಸಕರು, ಆಡಳಿತ ಸಿಬ್ಬಂದಿ, ವಿದ್ಯಾರ್ಥಿ ಸಂಘದ ಸದಸ್ಯರ ಸಮ್ಮುಖದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪಂ| ಡಾ ಆಂಟನಿ ಪ್ರಕಾಶ್ ಮೊಂತೆರೋ ರವರಿಗೆ ತಂಡದ ಅಧ್ಯಕ್ಷರಾದ ಡಾ. ಹೆಚ್. ಕೆ.ಸಿಂಗ್ ರವರು ನಿರ್ಗಮನ ವರದಿಯನ್ನು ಹಸ್ತಾಂತರಿಸಿದರು.
ಜನವರಿ 10 ರಂದು ಈ ಮೌಲ್ಯಾಂಕನ ಪ್ರಕ್ರಿಯೆಯ ಫಲಿತಾಂಶವು ಹೊರಬಂದಿದ್ದು, ಕಾಲೇಜಿಗೆ ಎ ಶ್ರೇಣಿ ದೊರಕಿರುತ್ತದೆ. ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆಂಟನಿ, ಪ್ರಕಾಶ್‌ ಮೊಂತರೂ ರವರ ನಿರ್ದೇಶನದಲ್ಲಿ ಪ್ರಾರಂಭಗೊಂಡ ಮೌಲ್ಯಾಂಕನಕ್ಕೊಳಪಡುವ ಪ್ರಕ್ರಿಯೆಯಲ್ಲಿ ಕಾಲೇಜಿನ ಕ್ಯಾಂಪ‌ ಸ್ ನಿರ್ದೇಶಕರಾದ ವಂ ಸ್ಟ್ಯಾನಿ ಪಿಂಟೋ, ಐಕ್ಕೂ ವಿಸಿ ಸಂಯೋಜಕರಾದ ಡಾ| ಎ ಪಿ ರಾಧಾಕೃಷ್ಣ, ಉಪಪ್ರಾಂಶುಪಾಲರಾದ ಶೆ ಗಣೇಶ್ ಭಟ್, ಸ್ವಅಧ್ಯಯನ ವರದಿ ತಯಾರಿಕಾ ತಂಡದ ಮುಖ್ಯಸ್ಥರಾದ ಪ್ರೊ. ವಿನಯಚಂದ್ರ ಕಾಲೇಜಿನ ಶಿಕ್ಷಕವೃಂದ, ಆಡಳಿತ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಸಹಕಾರ ನೀಡಿರುತ್ತಾರೆ.


ಫಲಿತಾಂಶ ದೊರಕಿದ ಹಿನ್ನೆಲೆಯಲ್ಲಿ ಆಟೋಲಿಕ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಅತಿ ವಂ|| ಬಿಷಪ್ ಪೀಟರ್ ವಾವ್ ನಲ್ತಾನರವರು ಪ್ರಾಂಶುಪಾಲರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿರುತ್ತಾರೆ. ಕ್ಯಾಥೊಲಿಕ್- ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾದ ಅತಿ ವಂ. ಆಂಟನಿ ಶೇರ್ರಾ, ಕಾಲೇಜಿನ ನಂಚಾಲಕರಾದ ಅತಿ ವಂ ಜೆರೋಮ್ ಲಾರೆನ್ಸ್ ಮಸ್ಕರೇಸ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಫಲಿತಾಂಶದ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು