11:52 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ 2022-23 ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ

24/11/2022, 23:24

ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ಪ್ರಸಕ್ತ ಶೈಕ್ಷಣಿಕ ವರ್ಷದ ಚಟುವಟಿಕೆ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮ ವನ್ನು ಕಾಲೇಜಿನ ಪ್ರಾಂಶುಪಾಲ ವಂ| ಡಾ. ಆಂಟನಿ ಪ್ರಕಾಶ್ ಮೊಂತೆರೊ ಉದ್ಘಾಟಿಸಿ ಮಾತನಾಡಿ, ನನಗಲ್ಲ ನಿನಗೆ ‘ಎಂಬ ಧೈಯವಾಕ್ಯದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿನ ಕೀಳರಿಮೆಯನ್ನು ಹೋಗಲಾಡಿಸಿ ನಾಯಕತ್ವ ಗುಣ ಹಾಗೂ ಸೇವಾ ಮನೋಭಾವಗಳನ್ನು ಉದ್ದೀಪನಗೊಳಿಸುವಲ್ಲಿ ಸಹಕಾರಿಯಾಗಿದೆ. ಪ್ರತಿಯೊಬ್ಬ ಸ್ವಯಂಸೇವಕನೂ ತನ್ನ ಜವಾಬ್ದಾರಿಯನ್ನರಿತು ಕಾರ್ಯ ನಿರ್ವಹಿಸಬೇಕು.

ಕಾಲೇಜಿನ ಪ್ರತಿಯೊಂದು ಚಟುವಟಿಕೆಯಲ್ಲಿ ಭಾಗವಹಿಸುವುದು ಮಾತ್ರವಲ್ಲದೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳಲ್ಲೂ ಭಾಗಿಯಾಗಬೇಕು. ಜನರಿಗೆ ದುರ್ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ಹಾಗೂ ಸಮಾಜದಲ್ಲಿನ ಹಲವಾರು ಪಿಡುಗುಗಳ ಬಗ್ಗೆ ಅರಿವು ಮೂಡಿಸಿ ದೇಶ ಕಟ್ಟುವ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಹೇಳಿದರು.

ಯೋಜನಾಧಿಕಾರಿ ಪುಷ್ಪಾ ಉಪಸ್ಥಿತರಿದ್ದರು.
ಹರ್ಷಿತಾ ಪ್ರಾರ್ಥಿಸಿದರು. ಯೋಜನಾಧಿಕಾರಿ ಪ್ರೊ. ವಾಸುದೇವ ಸ್ವಾಗತಿಸಿ ಪ್ರಾಸ್ತಾವವನೆಗೈದರು. ನಿರೀಕ್ಷಾ ವಂದಿಸಿ, ವೈಷ್ಣವಿ ನಿರೂಪಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ 2 ಘಟಕಗಳ 200 ಮಂದಿ ಸ್ವಯಂಸೇವಕರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು