2:37 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಚುನಾವಣಾ ದಿನಾಚರಣೆ

28/01/2023, 17:59

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಆಂತರಿಕ ಗುಣಮಟ್ಟ ಕೋಶಗಳ ಸಹಯೋಗದಲ್ಲಿ ರಾಷ್ಟ್ರೀಯ ಚುನಾವಣಾ ದಿನವನ್ನು ಆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಗಣೇಶ್ ಭಟ್ ಅವರು “ಯುವ ಜನತೆಯು ರಾಷ್ಟ್ರದ ಅತಿ ದೊಡ್ಡ ಸಂನ್ಮೂಲವಾಗಿದೆ, ಮನಾವಣೆಯಲ್ಲಿ ಭಾಗವಹಿಸುವುದು ಪ್ರತಿಯೋರ್ವ ನಾಗರಿಕನ ಕರ್ತವ್ಯವಾಗಿದೆ. ಯುವ ಜನತೆ ತಮ್ಮ ಜವಾಬ್ದಾರಿಯನ್ನರಿಗೆ ರಾಜ್ಯ ನಿರ್ಮಾಣ ಕಾರ್ಯದಲ್ಲಿ ಲಾಗಿಯಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆನೀಡಿದರು.

ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಎ. ರಾಧಾಕೃಷ್ಣರವರು ರಾಷ್ಟ್ರೀಯ ಚುನಾವಣಾ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಾ” ಚುನಾವಣೆಯಲ್ಲಿ ಭಾಗವಹಿಸಿದಾಗ ಮಾತ್ರವೇ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯ ಅಂಗವಾಗಿರುತ್ತೇವೆ. ಭಾರತೀಯ ಚುನಾವಣಾ ಆಯೋಗದ ಸಂಸ್ಥಾಪನಾ ದಿನದ ನೆನಪಿಗಾಗಿ ಹಾಗೂ ಯುವ ಚುನಾವಣೆಯ ಮುಹತ್ವದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ರಾಷ್ಟ್ರೀಯ ಚುನಾವಣಾ ದಿನವನ್ನು ಆಚರಿಸಲಾಗುತ್ತಿದೆ” ಎಂದು ಹೇಳಿದರು.


ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್‌ನ ಸಂಯೋಜಕರಾದ ಡಾ. ಎಂ ವಯಾ‌ ಪ್ರತಿಜ್ಞಾವಿಧಿ ಬೋಧಿಸಿದರು. ಹರ್ಷಿತಾ ಮತ್ತು ಬಳಗೆ ಪ್ರಾರ್ಥಿಸಿದರು. ಚುನಾವಣಾ ಸಾಕ್ಷರತಾ ಕ್ಲಬ್‌ನ ಸದಸ್ಯರಾದ ಗೀತಾ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಮತಗಟ್ಟೆಯ ಬೂತ್ ಲೆವೆಲ್ ಸರ್ ರಾಬರ್ಟ್‌ ಮೊಂತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು