1:04 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ

20/11/2022, 14:42

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಮಾನವಿಕ ಶಾಸ್ತ್ರ, ಇನ್ನೊವೇಶನ್‌ ಕೌನ್ಸಿಲ್ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶಗಳ ಸಹಯೋಗದಲ್ಲಿ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೆರೂ ಅವರು ಕಾರ್ಯಕ್ರಮದ ಅಧ್ಯಕ್ಷರಾಗಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು ” ನಾವು ಕೇವಲ ಓದು ಬರಹ ಕಲಿತಾಗ ವಿದ್ಯಾವಂತರೆನಿಸುವದಿಲ್ಲ. ಪ್ರತಿಯೊಬ್ಬನ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಮುಖ್ಯ ಉದ್ದೇಶ: ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿದಿನವು ಶಿಕ್ಷಣ ದಿನವಾಗಿರುತ್ತದೆ” ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಜಿರೆಯ ಯಸ್ ಡಿ ಯಂ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಎಚ್.ಮಾಧವ ಭಟ್ ರವರು “ಮಾನವ ಸಂಪನ್ಮೂಲವು ಎಲ್ಲಾ ಸಂಪತ್ತುಗಳಿಗೂ ಮಿಗಿಲಾದುದು. ತಾನು ಕಲಿತ ವಿದ್ಯೆಯನ್ನು ಮುಂದಿನ ಪೀಳಿಗೆಗೆ ಹಂಚಲು ಮಾನವನಿಂದ ಮಾತ್ರ ಸಾಧ್ಯ. ಪ್ರಸಕ್ತ ತಂತ್ರಜ್ಞಾನದ ಯುಗದಲ್ಲಿ ಜ್ಞಾನವು ಯಾರ
ಸೊತ್ತೂ ಅಲ್ಲ, ಅದು ನಮ್ಮೆಲ್ಲರ ಬೆರಳ ತುದಿಯಲ್ಲೇ ಇದೆ. ನಮಗೆ ಕಲಿಯಬೇಕೆಂಬ ಅದಮ್ಯ ತುಡಿತವಿದ್ದರೆ ಮಾತ್ರ
ಸಾಧನೆ ಸಾಧ್ಯ” ಎಂದು ಹೇಳಿದರು.


ಹಿತಶ್ರೀ ಮತ್ತು ಬಳಗ ಪ್ರಾರ್ಥಿಸಿದರು. ಕಾಲೇಜಿನ ಇನೊವೇಶನ್‌ ‌ಕೌನ್ಸಿಲ್ ಅಧ್ಯಕ್ಷೆ ಗೀತಾ ಪೂರ್ಣಿಮಾ ಸ್ವಾಗತಿಸಿದರು. ಮಾನವಿಕ ಶಾಸ್ತ್ರದ ಮುಖ್ಯಸ್ಥ ಪ್ರೊ. ಸುಬೇರ್ ವಂದಿಸಿ, ವಿದ್ಯಾರ್ಥಿನಿ ವಿನ್ಯ ರೈ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು