3:41 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ

20/11/2022, 14:42

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಮಾನವಿಕ ಶಾಸ್ತ್ರ, ಇನ್ನೊವೇಶನ್‌ ಕೌನ್ಸಿಲ್ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶಗಳ ಸಹಯೋಗದಲ್ಲಿ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೆರೂ ಅವರು ಕಾರ್ಯಕ್ರಮದ ಅಧ್ಯಕ್ಷರಾಗಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು ” ನಾವು ಕೇವಲ ಓದು ಬರಹ ಕಲಿತಾಗ ವಿದ್ಯಾವಂತರೆನಿಸುವದಿಲ್ಲ. ಪ್ರತಿಯೊಬ್ಬನ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಮುಖ್ಯ ಉದ್ದೇಶ: ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿದಿನವು ಶಿಕ್ಷಣ ದಿನವಾಗಿರುತ್ತದೆ” ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಜಿರೆಯ ಯಸ್ ಡಿ ಯಂ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಎಚ್.ಮಾಧವ ಭಟ್ ರವರು “ಮಾನವ ಸಂಪನ್ಮೂಲವು ಎಲ್ಲಾ ಸಂಪತ್ತುಗಳಿಗೂ ಮಿಗಿಲಾದುದು. ತಾನು ಕಲಿತ ವಿದ್ಯೆಯನ್ನು ಮುಂದಿನ ಪೀಳಿಗೆಗೆ ಹಂಚಲು ಮಾನವನಿಂದ ಮಾತ್ರ ಸಾಧ್ಯ. ಪ್ರಸಕ್ತ ತಂತ್ರಜ್ಞಾನದ ಯುಗದಲ್ಲಿ ಜ್ಞಾನವು ಯಾರ
ಸೊತ್ತೂ ಅಲ್ಲ, ಅದು ನಮ್ಮೆಲ್ಲರ ಬೆರಳ ತುದಿಯಲ್ಲೇ ಇದೆ. ನಮಗೆ ಕಲಿಯಬೇಕೆಂಬ ಅದಮ್ಯ ತುಡಿತವಿದ್ದರೆ ಮಾತ್ರ
ಸಾಧನೆ ಸಾಧ್ಯ” ಎಂದು ಹೇಳಿದರು.


ಹಿತಶ್ರೀ ಮತ್ತು ಬಳಗ ಪ್ರಾರ್ಥಿಸಿದರು. ಕಾಲೇಜಿನ ಇನೊವೇಶನ್‌ ‌ಕೌನ್ಸಿಲ್ ಅಧ್ಯಕ್ಷೆ ಗೀತಾ ಪೂರ್ಣಿಮಾ ಸ್ವಾಗತಿಸಿದರು. ಮಾನವಿಕ ಶಾಸ್ತ್ರದ ಮುಖ್ಯಸ್ಥ ಪ್ರೊ. ಸುಬೇರ್ ವಂದಿಸಿ, ವಿದ್ಯಾರ್ಥಿನಿ ವಿನ್ಯ ರೈ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು