12:33 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜು ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಕ್ರಮ

11/11/2022, 18:46

ಪುತ್ತೂರು(reporterkarnataka): ಸಂತ ಪಿಲೋಮಿನಾ ಕಾಲೇಜಿನಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ವಿದ್ಯಾರ್ಥಿ ಸಂಘ ಜಂಟಿಯಾಗಿ 2022-23ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಕ್ರಮ ಕಾಲೇಜಿನ ಸ್ಪಂದನ ಸಭಾಂಗಣದಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ.ಗಣೇಶ್ ಭಟ್ ವಹಿಸಿ,ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಅವರ ಜವಾಬ್ದಾರಿಗಳು ಮತ್ತು ಅವುಗಳನ್ನು ನಿಭಾಯಿಸುವ ಪರಿ ಹೇಗೆ ಎನ್ನುವ ನುಡಿಗಳೊಂದಿಗೆ 64 ವರ್ಷಗಳ ಇತಿಹಾಸವುಳ್ಳ ಈ ಕಾಲೇಜಿನ ಆಶೋತ್ತರಗಳಿಗೆ ಸದಾ ಸ್ಪಂದಿಸುವ ಮನೋಭಾವವನ್ನು ಹೊಂದಿರಬೇಕು ಹಾಗೂ ಕಾಲೇಜಿನ ಶಿಸ್ತು ಪರಿಪಾಲನೆಯ ಕಡೆಗೆ ವಿಶೇಷ ಗಮನ ಹರಿಸಬೇಕು. ಎಂದು ಕರೆ ನೀಡಿದರು.

ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಎ.ಪಿ.ರಾಧಾಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ನಾಯಕತ್ವಗುಣ ಹಾಗೂ ಕಾಲೇಜಿನಲ್ಲಿ ದೊರಕುವ ಅವಕಾಶಗಳ ಸದುಪಯೋಗದಿಂದ ಕ್ರಿಯಾಶೀಲರಾಗಿ ಮುನ್ನಡೆದು ಮುಂದೆ ದೇಶದ ಸಜೆಗಳಾಗಿ ಬಾಳಬೇಕು ಎಂದು
ನುಡಿದರು.
ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ. ಚಂದ್ರಶೇಖರ್ ಹಾಗೂ ಭಾರತಿ ಎಸ್. ರೈ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಕಾರ್ಯನಿರ್ವಹಿಸುವ ವಿಧಾನದ ಬಗ್ಗೆ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ವಿನ್ಸನ್ ಜೋಯ್ ಮಿನೇಜಸ್ ಹಾಗೂ ನಾಗ ಪ್ರಸಾದ್ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಮ್ಮದ್ ಅಕಿ‌ ಸ್ವಾಗತಿಸಿದರು.
ಜೊತೆ ಕಾರ್ಯದರ್ಶಿ ಶಿವಾನಿ ವಂದಿಸಿ, ಕಾರ್ಯದರ್ಶಿ ಅನುಶ್ರೀ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು