12:58 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಎನ್ ಸಿ ಸಿ ಘಟಕಗಳ ವತಿಯಿಂದ ರಕ್ತದಾನ ಶಿಬಿರ

28/11/2022, 21:11

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜು ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಎನ್ ಸಿ. ಸಿ ಘಟಕಗಳ ವತಿಯಿಂದ ರೋಟರಿ ಕ್ಯಾಂಪ್ಯೂ ಬ್ಲಡ್ ಸೆಂಟರ್ ಸಹಯೋಗದೊಂದಿಗೆ ಎನ್.ಸಿ.ಸಿ. ದಿನದ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ರೋಟರಿ ಕ್ಯಾಂಪ್ಕೊ -ಬ್ಲಡ್ ಸೆಂಟರ್ ನಲ್ಲಿ ಆಯೋಜಿಸಲಾಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ನ ವೈದ್ಯಾಧಿಕಾರಿಯಾದ ಡಾ| ರಾಮಚಂದ್ರ ಭಟ್ ರವರು ರಕ್ತದಾನವು ಸಕಲದಾನಗಳಿಗಿಂತಲೂ ಶ್ರೇಷ್ಠವಾದುದು ಯಾಕೆಂದರೆ ರಕ್ತವನ್ನು ಬೇರೆ ಯಾವುದೇ ಕೃತಕರೀತಿಯಲ್ಲಿ ತಯಾರಿಸಲು ಸಾಧ್ಯವಾಗುವುದಿಲ್ಲ. ಆರೋಗ್ಯವಂತ ವ್ಯಕ್ತಿಯು ದಾನಮಾಡುವ ಮೂಲಕ ಮಾತ್ರವೇ ರಕ್ತವನ್ನು ಪಡೆಯಬಹುದಾಗಿದೆ.
ಅಪಘಾತ, ಶಸ್ತ್ರಕ್ರಿಯೆ ಹಾಗೂ ಜ್ವರ ಮುಂತಾದ ಅನಾರೋಗ್ಯಗಳ ಸಂದರ್ಭದಲ್ಲಿ ರೋಗಿಗಳಿಗೆ ರಕ್ತದ ಅವಶ್ಯಕತೆ ಇರುತ್ತದೆ. 18 ವರ್ಷಗಳಿಗೆ ಮೇಲ್ಪಟ್ಟ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದಾಗಿದೆ” ಎಂದು ಹೇಳಿದರು.

ಕಾಲೇಜಿನ ಎನ್ ಸಿಸಿ ಭೂದಳದ ಅಧಿಕಾರಿ ಲೆ ಜೋನ್ಸನ್ ಡೇವಿಡ್ ಸಿಕ್ವೆರಾ ಹಾಗೂ ನೌಕಾದಳದ ಅಧಿಕಾರಿ ತೇಜಸ್ವಿ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು. 50 ಕೆಡೆಟ್ ಗಳು ರಕ್ತದಾನ ಮಾಡುವ ಮೂಲಕ ತಮಗಿರುವ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು