10:12 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಎನ್ ಸಿ ಸಿ ಘಟಕಗಳ ವತಿಯಿಂದ ರಕ್ತದಾನ ಶಿಬಿರ

28/11/2022, 21:11

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜು ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಎನ್ ಸಿ. ಸಿ ಘಟಕಗಳ ವತಿಯಿಂದ ರೋಟರಿ ಕ್ಯಾಂಪ್ಯೂ ಬ್ಲಡ್ ಸೆಂಟರ್ ಸಹಯೋಗದೊಂದಿಗೆ ಎನ್.ಸಿ.ಸಿ. ದಿನದ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ರೋಟರಿ ಕ್ಯಾಂಪ್ಕೊ -ಬ್ಲಡ್ ಸೆಂಟರ್ ನಲ್ಲಿ ಆಯೋಜಿಸಲಾಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ನ ವೈದ್ಯಾಧಿಕಾರಿಯಾದ ಡಾ| ರಾಮಚಂದ್ರ ಭಟ್ ರವರು ರಕ್ತದಾನವು ಸಕಲದಾನಗಳಿಗಿಂತಲೂ ಶ್ರೇಷ್ಠವಾದುದು ಯಾಕೆಂದರೆ ರಕ್ತವನ್ನು ಬೇರೆ ಯಾವುದೇ ಕೃತಕರೀತಿಯಲ್ಲಿ ತಯಾರಿಸಲು ಸಾಧ್ಯವಾಗುವುದಿಲ್ಲ. ಆರೋಗ್ಯವಂತ ವ್ಯಕ್ತಿಯು ದಾನಮಾಡುವ ಮೂಲಕ ಮಾತ್ರವೇ ರಕ್ತವನ್ನು ಪಡೆಯಬಹುದಾಗಿದೆ.
ಅಪಘಾತ, ಶಸ್ತ್ರಕ್ರಿಯೆ ಹಾಗೂ ಜ್ವರ ಮುಂತಾದ ಅನಾರೋಗ್ಯಗಳ ಸಂದರ್ಭದಲ್ಲಿ ರೋಗಿಗಳಿಗೆ ರಕ್ತದ ಅವಶ್ಯಕತೆ ಇರುತ್ತದೆ. 18 ವರ್ಷಗಳಿಗೆ ಮೇಲ್ಪಟ್ಟ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದಾಗಿದೆ” ಎಂದು ಹೇಳಿದರು.

ಕಾಲೇಜಿನ ಎನ್ ಸಿಸಿ ಭೂದಳದ ಅಧಿಕಾರಿ ಲೆ ಜೋನ್ಸನ್ ಡೇವಿಡ್ ಸಿಕ್ವೆರಾ ಹಾಗೂ ನೌಕಾದಳದ ಅಧಿಕಾರಿ ತೇಜಸ್ವಿ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು. 50 ಕೆಡೆಟ್ ಗಳು ರಕ್ತದಾನ ಮಾಡುವ ಮೂಲಕ ತಮಗಿರುವ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು