11:52 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಎನ್ ಸಿ ಸಿ ಘಟಕಗಳ ವತಿಯಿಂದ ರಕ್ತದಾನ ಶಿಬಿರ

28/11/2022, 21:11

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜು ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಎನ್ ಸಿ. ಸಿ ಘಟಕಗಳ ವತಿಯಿಂದ ರೋಟರಿ ಕ್ಯಾಂಪ್ಯೂ ಬ್ಲಡ್ ಸೆಂಟರ್ ಸಹಯೋಗದೊಂದಿಗೆ ಎನ್.ಸಿ.ಸಿ. ದಿನದ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ರೋಟರಿ ಕ್ಯಾಂಪ್ಕೊ -ಬ್ಲಡ್ ಸೆಂಟರ್ ನಲ್ಲಿ ಆಯೋಜಿಸಲಾಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ನ ವೈದ್ಯಾಧಿಕಾರಿಯಾದ ಡಾ| ರಾಮಚಂದ್ರ ಭಟ್ ರವರು ರಕ್ತದಾನವು ಸಕಲದಾನಗಳಿಗಿಂತಲೂ ಶ್ರೇಷ್ಠವಾದುದು ಯಾಕೆಂದರೆ ರಕ್ತವನ್ನು ಬೇರೆ ಯಾವುದೇ ಕೃತಕರೀತಿಯಲ್ಲಿ ತಯಾರಿಸಲು ಸಾಧ್ಯವಾಗುವುದಿಲ್ಲ. ಆರೋಗ್ಯವಂತ ವ್ಯಕ್ತಿಯು ದಾನಮಾಡುವ ಮೂಲಕ ಮಾತ್ರವೇ ರಕ್ತವನ್ನು ಪಡೆಯಬಹುದಾಗಿದೆ.
ಅಪಘಾತ, ಶಸ್ತ್ರಕ್ರಿಯೆ ಹಾಗೂ ಜ್ವರ ಮುಂತಾದ ಅನಾರೋಗ್ಯಗಳ ಸಂದರ್ಭದಲ್ಲಿ ರೋಗಿಗಳಿಗೆ ರಕ್ತದ ಅವಶ್ಯಕತೆ ಇರುತ್ತದೆ. 18 ವರ್ಷಗಳಿಗೆ ಮೇಲ್ಪಟ್ಟ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದಾಗಿದೆ” ಎಂದು ಹೇಳಿದರು.

ಕಾಲೇಜಿನ ಎನ್ ಸಿಸಿ ಭೂದಳದ ಅಧಿಕಾರಿ ಲೆ ಜೋನ್ಸನ್ ಡೇವಿಡ್ ಸಿಕ್ವೆರಾ ಹಾಗೂ ನೌಕಾದಳದ ಅಧಿಕಾರಿ ತೇಜಸ್ವಿ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು. 50 ಕೆಡೆಟ್ ಗಳು ರಕ್ತದಾನ ಮಾಡುವ ಮೂಲಕ ತಮಗಿರುವ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು