12:55 AM Sunday22 - September 2024
ಬ್ರೇಕಿಂಗ್ ನ್ಯೂಸ್
2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜು: ಕೆದಂಬಾಡಿ ದತ್ತು ಗ್ರಾಮದಲ್ಲಿ ಸಾಂಸ್ಕೃತಿಕ ವೈಭವ

29/12/2022, 10:32

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾ ಕೇಂದ್ರದ ವತಿಯಿಂದ ಕೆದಂಬಾಡಿ ಗ್ರಾಮದ ಶ್ರೀರಾಮ ಭಜನಾ ಮಂದಿರದಲ್ಲಿ “ಭರತ ವೈಭವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶ್ರೀರಾಮ ಭಜನಾ ಮಂದಿರದ ಪ್ರತಿಷ್ಠಾ ವಾಷಿಕೋತ್ಸವದ ಸಂದರ್ಭದಲ್ಲಿ ಕಾಲೇಜಿನ ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಈ ವಿಶೇಷ ಕಾರ್ಯಕ್ರಮವನ್ನು ಪ್ರದರ್ಶಿಸಿದರು. ಸುಮಾರು ಒಂದು ಗಂಟೆಯ ಕಾಲ ನಡೆದ ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಜಾನಪದ ನೃತ್ಯಗಳನ್ನು ಪ್ರದರ್ಶಿಸಿದರು.

ಭರತ ವೈಭವ ಕಾರ್ಯಕ್ರಮನ್ನು ಕಾಲೇಜಿನ ಯಕ್ಷಕಲಾ ಕೇಂದ್ರದ ಸಂಯೋಜಕರಾದ ಪ್ರಶಾಂತ್‌ ರೈ ಅವರು ನಿರ್ದೇಶಿಸಿದರು. ಈ ಸಂದರ್ಭದಲ್ಲಿ -ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಜಯಶಂಕರ ರೈ ಬೆಡ್ರುಮಾರು ,ಎನ್ ಎಸ್ ಕಿಲ್ಲೆ ಪ್ರತಿಷ್ಠಾನದ ಸದಸ್ಯರಾದ ವಿಜಯ ಕುಮಾರ್ ರೈ, ಕೋರಂಗ ಮೋಹನ ಆಳ್ವ ಮುಂಡಲಗುತ್ತು ಹಾಗೂ ವಿಫುಲ್ ಕಡಮಜಲು ಉಪಸ್ಥಿತರಿದ್ದರು, ಸಂತ ಫಿಲೋಮಿನಾ ಕಾಲೇಜು, ಕೆದಂಬಾಡಿ ಗ್ರಾಮ ಪಂಚಾಯತ್‌ ಮತ್ತು ದೇಶಭಕ್ತ ಎಸ್.ಎಸ್.ಕಿಲ್ಲೆ ಪ್ರತಿಷ್ಠಾನ ಒಡಂಬಡಿಕೆ ಪತ್ರಕ್ಕೆ ಈಗಾಗಲೇ ಸಹಿ ಮಾಡಿದ್ದು ಮುಂದಿನ ದಿನಗಳಲ್ಲಿ ಕಾಲೇಜಿನ ವತಿಯಿಂದ ಕೆದಂಬಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು