9:04 PM Friday23 - January 2026
ಬ್ರೇಕಿಂಗ್ ನ್ಯೂಸ್
ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜು: ಕೆದಂಬಾಡಿ ದತ್ತು ಗ್ರಾಮದಲ್ಲಿ ಸಾಂಸ್ಕೃತಿಕ ವೈಭವ

29/12/2022, 10:32

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾ ಕೇಂದ್ರದ ವತಿಯಿಂದ ಕೆದಂಬಾಡಿ ಗ್ರಾಮದ ಶ್ರೀರಾಮ ಭಜನಾ ಮಂದಿರದಲ್ಲಿ “ಭರತ ವೈಭವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶ್ರೀರಾಮ ಭಜನಾ ಮಂದಿರದ ಪ್ರತಿಷ್ಠಾ ವಾಷಿಕೋತ್ಸವದ ಸಂದರ್ಭದಲ್ಲಿ ಕಾಲೇಜಿನ ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಈ ವಿಶೇಷ ಕಾರ್ಯಕ್ರಮವನ್ನು ಪ್ರದರ್ಶಿಸಿದರು. ಸುಮಾರು ಒಂದು ಗಂಟೆಯ ಕಾಲ ನಡೆದ ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಜಾನಪದ ನೃತ್ಯಗಳನ್ನು ಪ್ರದರ್ಶಿಸಿದರು.

ಭರತ ವೈಭವ ಕಾರ್ಯಕ್ರಮನ್ನು ಕಾಲೇಜಿನ ಯಕ್ಷಕಲಾ ಕೇಂದ್ರದ ಸಂಯೋಜಕರಾದ ಪ್ರಶಾಂತ್‌ ರೈ ಅವರು ನಿರ್ದೇಶಿಸಿದರು. ಈ ಸಂದರ್ಭದಲ್ಲಿ -ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಜಯಶಂಕರ ರೈ ಬೆಡ್ರುಮಾರು ,ಎನ್ ಎಸ್ ಕಿಲ್ಲೆ ಪ್ರತಿಷ್ಠಾನದ ಸದಸ್ಯರಾದ ವಿಜಯ ಕುಮಾರ್ ರೈ, ಕೋರಂಗ ಮೋಹನ ಆಳ್ವ ಮುಂಡಲಗುತ್ತು ಹಾಗೂ ವಿಫುಲ್ ಕಡಮಜಲು ಉಪಸ್ಥಿತರಿದ್ದರು, ಸಂತ ಫಿಲೋಮಿನಾ ಕಾಲೇಜು, ಕೆದಂಬಾಡಿ ಗ್ರಾಮ ಪಂಚಾಯತ್‌ ಮತ್ತು ದೇಶಭಕ್ತ ಎಸ್.ಎಸ್.ಕಿಲ್ಲೆ ಪ್ರತಿಷ್ಠಾನ ಒಡಂಬಡಿಕೆ ಪತ್ರಕ್ಕೆ ಈಗಾಗಲೇ ಸಹಿ ಮಾಡಿದ್ದು ಮುಂದಿನ ದಿನಗಳಲ್ಲಿ ಕಾಲೇಜಿನ ವತಿಯಿಂದ ಕೆದಂಬಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು