9:24 PM Thursday20 - February 2025
ಬ್ರೇಕಿಂಗ್ ನ್ಯೂಸ್
Lokayukta | ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ನಿರೀಕ್ಷಿತ: ಹುಬ್ಬಳ್ಳಿಯಲ್ಲಿ ಕೇಂದ್ರ… ನಂಜನಗೂಡು: ಆಹಾರ ಸುರಕ್ಷತಾ ಅಧಿಕಾರಿಗಳಿಂದ ಹೋಟೆಲ್ ಗಳಿಗೆ ದಿಢೀರ್ ದಾಳಿ; ಇಡ್ಲಿ ತಯಾರಿಕೆಯಲ್ಲಿ… ಲಿಂಗಸುಗೂರ: ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ; ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ನಾಗರತ್ನ,… Waterfalls Tragedy | ಚಿಕ್ಕಮಗಳೂರು ಕಾಮೇನಹಳ್ಳಿ ಜಲಪಾತ: ಈಜಲು ಹೋದ ಯುವಕನ ತಲೆ… CM PROMISE | ಪತ್ರಿಕೋದ್ಯಮ -ಪತ್ರಕರ್ತರ ಹಿತರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ದಿವಾಳಿಯಾಗಿದೆ, ಗ್ಯಾರಂಟಿ ಕೊಡಲು ಹಣವಿಲ್ಲ, ಅಭಿವೃದ್ಧಿಗೆ ಅನುದಾನವಿಲ್ಲ: ಪ್ರತಿಪಕ್ಷದ ನಾಯಕ ಆರ್.… ಬಳ್ಳಾರಿ: ಅನಧಿಕೃತ ಬಡಾವಣೆಯ ಸೈಟು ಹಾಗೂ ಮನೆಗಳಿಗೆ 10 ದಿನದೊಳಗೆ ಬಿ ಖಾತಾ ‘ಗ್ರಾಮದ ಹುಡುಗರು’ ವಾಟ್ಸಪ್ ತಂಡದಿಂದ ಮೂಡಿಗೆರೆ ಗೌಡಹಳ್ಳಿ ಸರಕಾರಿ ಶಾಲೆಗೆ ಕಾಯಕಲ್ಪ: ಸುಣ್ಣಬಣ್ಣ… ಬಾಗಲಕೋಟೆ ಮಾಜಿ ಶಾಸಕರಿಂದ ಗೂಂಡಾಗಿರಿ?: ವೀರಣ್ಣ ಚರಂತಿಮಠ ಸಹಿತ 4 ಮಂದಿ ವಿರುದ್ದ… ನೈತಿಕ ಅಧಃಪತನದತ್ತ ಸಾಗಿದೆಯೇ ಕನ್ನಡ ವಿಶ್ವವಿದ್ಯಾಲಯ?: ಇದು ಎಂ.ಫಿಲ್, ಪಿಎಚ್‌ಡಿ ಮಾರಾಟಕ್ಕಿಟ್ಟ ಅಂಗಡಿಯಾಗುವುದು…

ಇತ್ತೀಚಿನ ಸುದ್ದಿ

PWD Minister Visit | ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆದೇಶ

18/02/2025, 12:02

ಬೆಳ್ತಂಗಡಿ(reporterkarnataka.com): ಗುರುವಾಯಾನಕೆರೆಗೆ ಭೇಟಿ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕುರಿತು ಮನವಿ ಸಲ್ಲಿಸಲಾಯಿತು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಸಚಿವರಿಗೆ ಗುರುವಾಯಾನಕೆರೆಯಲ್ಲಿ ಸಾರ್ವಜನಿಕರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ನೇತೃತ್ವದಲ್ಲಿ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕೆಲವೊಂದು ಕಡೆ ಆಗಬೇಕಿರುವ ಬದಲಾವಣೆಗಳ ಬಗ್ಗೆ ಮನವಿ ಸಲ್ಲಿಸಿದರು, ಮನವಿಗೆ ಸ್ಪಂದಿಸಿದ ಸಚಿವರು ಸ್ಥಳದಲ್ಲೇ ಅಧಿಕಾರಿಗಳಿಗೆ ಶೀಘ್ರದಲ್ಲಿ ಪರಿಹರಿಸುವಂತೆ ಆದೇಶ ನೀಡಿದರು. ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ್ ನಾಯಕ್, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ, ವಿಶ್ವೇಶ್ ಕಿಣಿ, ದಿನೇಶ್ ಮೂಲ್ಯ ಕೊಂಡೆಮಾರ್, ಧನಂಜಯ್ ರಾವ್, ನಜೀರ್, ಶರೀಫ್, ಅಬ್ದುಲ್ ಕರೀಮ್, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು