9:11 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಪಿಡಬ್ಲ್ಯುಡಿಗೆ ಹಿಡಿಶಾಪ ಹಾಕುತ್ತಿದ್ದವರು ಪೊಲೀಸರಿಗೆ ಜೈ ಎಂದರು!: ರಸ್ತೆ ಗುಂಡಿ ಮುಚ್ಚಿದ ಖಾಕಿ ಪಡೆ!!

18/08/2023, 10:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯ ಹೆದ್ದಾರಿಯಲ್ಲಿ ಗುಂಡಿಯೋ…ಗುಂಡಿ. ಹೊಂಡ ಬಿದ್ದ ರಸ್ತೆಯಲ್ಲಿ ವಾಹನ ಚಲಾಯಿಸಲಾಗದೆ ಪ್ರಯಾಣಿಕರು ಹೈರಾಣಾಗಿದ್ದರು. ಇದನ್ನು ಮನಗಂಡ ಪೊಲೀಸ್ ಇಲಾಖೆ ಸ್ವಂತ ಖರ್ಚಿನಲ್ಲಿ ಗುಂಡಿ ಮುಚ್ಚುವ ಕೆಲಸ ಮಾಡಿದೆ.


ಇದೆಲ್ಲ ನಡೆದದ್ದು ಚಿಕ್ಕಮಗಳೂರು-ಶೃಂಗೇರಿ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಳಿ ಭಾರೀ ಗುಂಡಿಗಳ ಗೋಳು ತಡೆಯಲಾಗದೆ ಸ್ವಂತ ಖರ್ಚಿನಲ್ಲಿ ಸಿಪಿಐ, ಪಿಎಸ್ಐ ರಸ್ತೆಗೆ ಮಣ್ಣು ಹಾಕಿಸಿ ಗುಂಡಿ ಮುಚ್ಚಿದ್ದಾರೆ. ಎರಡು ಟ್ರಾಕ್ಟರ್ ಮಣ್ಣು ತರಿಸಿ ಗುಂಡಿ ಮುಚ್ಚಿದ್ದಾರೆ. ಲೋಕೋಪಯೋಗಿ ಇಲಾಖೆಗೆ ಹಿಡಿಶಾಪ ಹಾಕಿಕೊಂಡೇ ಓಡಾಡುತ್ತಿದ್ದ ವಾಹನ ಚಾಲಕರು ಪೊಲೀಸರಿಗೆ ಸೆಲ್ಯೂಟ್ ಹೊಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು