6:03 AM Wednesday19 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ರಾಯಿ ಸರಕಾರಿ ವಿದ್ಯಾಸಂಸ್ಥೆ: ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಮಾಹಿತಿ

13/11/2024, 22:04

ಬಂಟ್ವಾಳ(reporterkarnataka.com): ರಾಯಿ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಹಾಗೂ ಕನ್ನಡ ಮಾಧ್ಯಮದ ಸಾಧಕಗಳ ಕುರಿತು ಮಾಹಿತಿ ನೀಡಲಾಯಿತು.

ಬೆಂಗಳೂರು ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಅವರು ಮಾಹಿತಿದಾರರಾಗಿ ಆಗಮಿಸಿದ್ದರು. ಅವರು ತಮ್ಮ ಭಾಷಣದಲ್ಲಿ ಗ್ರಾಮೀಣ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗೆ ಸರಕಾರವು ಅತ್ಯುತ್ತಮವಾದಂತಹ ಸೌಲಭ್ಯವನ್ನು ಒದಗಿಸಿಕೊಡುತ್ತಿದ್ದು ಉಚಿತವಾಗಿ ದೊರಕುವ ಎಲ್ಲಾ ಸವಲತ್ತುಗಳೊಂದಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದ ಸಂದರ್ಭದಲ್ಲಿ ಕನ್ನಡ ಮಾಧ್ಯಮಕ್ಕೆ ಮತ್ತು ಗ್ರಾಮೀಣ ಶಿಕ್ಷಣಕ್ಕೆ ಕೃಪಾಂಕ ನೀಡಿ ಪ್ರೋತ್ಸಾಹಿಸುತ್ತಿದೆ. ಸರಕಾರ ನೀಡುತ್ತಿರುವ ಈ ಎಲ್ಲ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಬದುಕನ್ನು ಬೆಳಗಿಸಿಕೊಳ್ಳಬೇಕೆಂದು ಹಲವಾರು ಉದಾಹರಣೆಗಳನ್ನು ನೀಡಿ ಮನವಿ ಮಾಡಿಕೊಂಡರು.
ಮುಖ್ಯ ಶಿಕ್ಷಕಿ ತನುಜ ಸ್ವಾಗತಿಸಿದರು. ಬಾಬಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು