12:59 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ರಾಯಿ ಸರಕಾರಿ ವಿದ್ಯಾಸಂಸ್ಥೆ: ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಮಾಹಿತಿ

13/11/2024, 22:04

ಬಂಟ್ವಾಳ(reporterkarnataka.com): ರಾಯಿ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಹಾಗೂ ಕನ್ನಡ ಮಾಧ್ಯಮದ ಸಾಧಕಗಳ ಕುರಿತು ಮಾಹಿತಿ ನೀಡಲಾಯಿತು.

ಬೆಂಗಳೂರು ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಅವರು ಮಾಹಿತಿದಾರರಾಗಿ ಆಗಮಿಸಿದ್ದರು. ಅವರು ತಮ್ಮ ಭಾಷಣದಲ್ಲಿ ಗ್ರಾಮೀಣ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗೆ ಸರಕಾರವು ಅತ್ಯುತ್ತಮವಾದಂತಹ ಸೌಲಭ್ಯವನ್ನು ಒದಗಿಸಿಕೊಡುತ್ತಿದ್ದು ಉಚಿತವಾಗಿ ದೊರಕುವ ಎಲ್ಲಾ ಸವಲತ್ತುಗಳೊಂದಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದ ಸಂದರ್ಭದಲ್ಲಿ ಕನ್ನಡ ಮಾಧ್ಯಮಕ್ಕೆ ಮತ್ತು ಗ್ರಾಮೀಣ ಶಿಕ್ಷಣಕ್ಕೆ ಕೃಪಾಂಕ ನೀಡಿ ಪ್ರೋತ್ಸಾಹಿಸುತ್ತಿದೆ. ಸರಕಾರ ನೀಡುತ್ತಿರುವ ಈ ಎಲ್ಲ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಬದುಕನ್ನು ಬೆಳಗಿಸಿಕೊಳ್ಳಬೇಕೆಂದು ಹಲವಾರು ಉದಾಹರಣೆಗಳನ್ನು ನೀಡಿ ಮನವಿ ಮಾಡಿಕೊಂಡರು.
ಮುಖ್ಯ ಶಿಕ್ಷಕಿ ತನುಜ ಸ್ವಾಗತಿಸಿದರು. ಬಾಬಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು