4:16 AM Tuesday7 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ರಾಯಿ ಸರಕಾರಿ ವಿದ್ಯಾಸಂಸ್ಥೆ: ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಮಾಹಿತಿ

13/11/2024, 22:04

ಬಂಟ್ವಾಳ(reporterkarnataka.com): ರಾಯಿ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಹಾಗೂ ಕನ್ನಡ ಮಾಧ್ಯಮದ ಸಾಧಕಗಳ ಕುರಿತು ಮಾಹಿತಿ ನೀಡಲಾಯಿತು.

ಬೆಂಗಳೂರು ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಅವರು ಮಾಹಿತಿದಾರರಾಗಿ ಆಗಮಿಸಿದ್ದರು. ಅವರು ತಮ್ಮ ಭಾಷಣದಲ್ಲಿ ಗ್ರಾಮೀಣ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗೆ ಸರಕಾರವು ಅತ್ಯುತ್ತಮವಾದಂತಹ ಸೌಲಭ್ಯವನ್ನು ಒದಗಿಸಿಕೊಡುತ್ತಿದ್ದು ಉಚಿತವಾಗಿ ದೊರಕುವ ಎಲ್ಲಾ ಸವಲತ್ತುಗಳೊಂದಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದ ಸಂದರ್ಭದಲ್ಲಿ ಕನ್ನಡ ಮಾಧ್ಯಮಕ್ಕೆ ಮತ್ತು ಗ್ರಾಮೀಣ ಶಿಕ್ಷಣಕ್ಕೆ ಕೃಪಾಂಕ ನೀಡಿ ಪ್ರೋತ್ಸಾಹಿಸುತ್ತಿದೆ. ಸರಕಾರ ನೀಡುತ್ತಿರುವ ಈ ಎಲ್ಲ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಬದುಕನ್ನು ಬೆಳಗಿಸಿಕೊಳ್ಳಬೇಕೆಂದು ಹಲವಾರು ಉದಾಹರಣೆಗಳನ್ನು ನೀಡಿ ಮನವಿ ಮಾಡಿಕೊಂಡರು.
ಮುಖ್ಯ ಶಿಕ್ಷಕಿ ತನುಜ ಸ್ವಾಗತಿಸಿದರು. ಬಾಬಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು