12:24 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ರಾಜಧಾನಿ ದೆಹಲಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ತಾಪಮಾನ: ಸುಡು ಬಿಸಿಲಿಗೆ ಜನರು ತತ್ತರ; ಯೆಲ್ಲೋ ಅಲರ್ಟ್ 

28/04/2022, 11:25

ಹೊಸದಿಲ್ಲಿ :(reporterkarnataka.com): ರಣಬಿಸಿಲ ಧಗೆಗೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರಿಸಿ ಹೋಗಿದ್ದು, ಬುಧವಾರ ದೆಹಲಿಯಲ್ಲಿ ಬರೊಬ್ಬರಿ 46 ಡಿಗ್ರಿ ತಾಪಮಾನ ದಾಖಲಾಗಿದೆ. ಆ ಮೂಲಕ ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದೆಹಲಿಯ ಸಫ್ದರ್‌ಜಂಗ್ ವೀಕ್ಷಣಾಲಯವು ಮಂಗಳವಾರ ಗರಿಷ್ಠ 40.8 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸಿತ್ತು. ಇದು ಬುಧವಾರದಂದು 42 ಡಿಗ್ರಿ ಮಾರ್ಕ್ ಅನ್ನು ಮೀರುವ ನಿರೀಕ್ಷೆಯಿದೆ ಮತ್ತು ಗುರುವಾರದ ವೇಳೆಗೆ 44 ಡಿಗ್ರಿ ಸೆಲ್ಸಿಯಸ್‌ಗೆ ಏರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ದೆಹಲಿಯ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 46 ಡಿಗ್ರಿ ಸೆಲ್ಸಿಯಸ್‌ಗೆ ಏರಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹಿಂದೆ ಏಪ್ರಿಲ್ 21, 2017 ರಂದು ರಾಜಧಾನಿಯಲ್ಲಿ ಗರಿಷ್ಠ ತಾಪಮಾನ 43.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಅಂತೆಯೇ ಏಪ್ರಿಲ್ 29, 1941 ರಂದು ತಿಂಗಳ ಸಾರ್ವಕಾಲಿಕ ಗರಿಷ್ಠ ತಾಪಮಾನವು 45.6 ಡಿಗ್ರಿ ಸೆಲ್ಸಿಯಸ್ ಆಗಿತ್ತು.

ಭಾರತೀಯ ಹವಾಮಾನ ಇಲಾಖೆ (IMD) ಹವಾಮಾನ ಇಲಾಖೆ ದೆಹಲಿಯಲ್ಲಿ ಇದೀಗ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ತಾಪಮಾನಕ್ಕೆ ಸಂಬಂಧಿಸಿದಂತೆ ಕ್ರಮಕ್ಕೆ ಸೂಚಿಸಿದೆ. ಶಾಖದ ಅಲೆಯು ಪೀಡಿತ ಪ್ರದೇಶಗಳಲ್ಲಿ ದುರ್ಬಲ ಜನರಿಗೆ – ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ “ಮಧ್ಯಮ” ಆರೋಗ್ಯ ಕಾಳಜಿ ವಹಿಸಬೇಕು. ಎಲ್ಲೋ ಅಲರ್ಟ್ ಘೋಷಿತ ಪ್ರದೇಶಗಳಲ್ಲಿ ಜನರು ಶಾಖಕ್ಕೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು, ಹಗುರವಾದ, ತಿಳಿ ಬಣ್ಣದ, ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಬೇಕು ಮತ್ತು ಬಟ್ಟೆ, ಟೋಪಿ ಅಥವಾ ಛತ್ರಿ ಇತ್ಯಾದಿಗಳನ್ನು ಬಳಸಿ ತಲೆಯನ್ನು ಮುಚ್ಚಬೇಕು ಎಂದು ಐಎಂಡಿ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು