4:02 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜಧಾನಿ ದೆಹಲಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ತಾಪಮಾನ: ಸುಡು ಬಿಸಿಲಿಗೆ ಜನರು ತತ್ತರ; ಯೆಲ್ಲೋ ಅಲರ್ಟ್ 

28/04/2022, 11:25

ಹೊಸದಿಲ್ಲಿ :(reporterkarnataka.com): ರಣಬಿಸಿಲ ಧಗೆಗೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರಿಸಿ ಹೋಗಿದ್ದು, ಬುಧವಾರ ದೆಹಲಿಯಲ್ಲಿ ಬರೊಬ್ಬರಿ 46 ಡಿಗ್ರಿ ತಾಪಮಾನ ದಾಖಲಾಗಿದೆ. ಆ ಮೂಲಕ ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದೆಹಲಿಯ ಸಫ್ದರ್‌ಜಂಗ್ ವೀಕ್ಷಣಾಲಯವು ಮಂಗಳವಾರ ಗರಿಷ್ಠ 40.8 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸಿತ್ತು. ಇದು ಬುಧವಾರದಂದು 42 ಡಿಗ್ರಿ ಮಾರ್ಕ್ ಅನ್ನು ಮೀರುವ ನಿರೀಕ್ಷೆಯಿದೆ ಮತ್ತು ಗುರುವಾರದ ವೇಳೆಗೆ 44 ಡಿಗ್ರಿ ಸೆಲ್ಸಿಯಸ್‌ಗೆ ಏರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ದೆಹಲಿಯ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 46 ಡಿಗ್ರಿ ಸೆಲ್ಸಿಯಸ್‌ಗೆ ಏರಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹಿಂದೆ ಏಪ್ರಿಲ್ 21, 2017 ರಂದು ರಾಜಧಾನಿಯಲ್ಲಿ ಗರಿಷ್ಠ ತಾಪಮಾನ 43.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಅಂತೆಯೇ ಏಪ್ರಿಲ್ 29, 1941 ರಂದು ತಿಂಗಳ ಸಾರ್ವಕಾಲಿಕ ಗರಿಷ್ಠ ತಾಪಮಾನವು 45.6 ಡಿಗ್ರಿ ಸೆಲ್ಸಿಯಸ್ ಆಗಿತ್ತು.

ಭಾರತೀಯ ಹವಾಮಾನ ಇಲಾಖೆ (IMD) ಹವಾಮಾನ ಇಲಾಖೆ ದೆಹಲಿಯಲ್ಲಿ ಇದೀಗ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ತಾಪಮಾನಕ್ಕೆ ಸಂಬಂಧಿಸಿದಂತೆ ಕ್ರಮಕ್ಕೆ ಸೂಚಿಸಿದೆ. ಶಾಖದ ಅಲೆಯು ಪೀಡಿತ ಪ್ರದೇಶಗಳಲ್ಲಿ ದುರ್ಬಲ ಜನರಿಗೆ – ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ “ಮಧ್ಯಮ” ಆರೋಗ್ಯ ಕಾಳಜಿ ವಹಿಸಬೇಕು. ಎಲ್ಲೋ ಅಲರ್ಟ್ ಘೋಷಿತ ಪ್ರದೇಶಗಳಲ್ಲಿ ಜನರು ಶಾಖಕ್ಕೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು, ಹಗುರವಾದ, ತಿಳಿ ಬಣ್ಣದ, ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಬೇಕು ಮತ್ತು ಬಟ್ಟೆ, ಟೋಪಿ ಅಥವಾ ಛತ್ರಿ ಇತ್ಯಾದಿಗಳನ್ನು ಬಳಸಿ ತಲೆಯನ್ನು ಮುಚ್ಚಬೇಕು ಎಂದು ಐಎಂಡಿ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು