7:51 PM Tuesday26 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಬಳ್ಳಾರಿ ವಿವಿಯ ಬಯಲು ರಂಗ ಮಂದಿರಕ್ಕೆ ರಾಘವರ ಹೆಸರು: ಸರಕಾರಕ್ಕೆ ಶಿಫಾರಸು

03/08/2024, 16:16

ಗಣೇಶ ಇನಾಂದಾರ ಬಳ್ಳಾರಿ
info.reporterkarnataka@gmail.com

ಬಳ್ಳಾರಿ ನಗರದ ರಾಘವ ಕಲಾ ಮಂದಿರದಲ್ಲಿ ಹಮ್ಮಿಕೊಂಡಿರುವ ನಾಟ್ಯ ಕಲಾ ಪ್ರಪೂರ್ಣ ಬಳ್ಳಾರಿ ರಾಘವರ 144ನೇ ಜಯಂತಿ ಮತ್ತು ರಾಘವರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಜಿಲ್ಲಾ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು ಚಾಲನೆ ನೀಡಿ ಪ್ರಶಸ್ತಿ ಪ್ರದಾನ‌ ಮಾಡಿದರು.
ಸಮಾರಂಭದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಕುಲ ಸಚಿವ ಎಸ್.ಎನ್. ರುದ್ರೇಶ್ ಮಾತನಾಡಿ, ವಿವಿಯಲ್ಲಿ ನಿರ್ಮಾಣ ಮಾಡುತ್ತಿರುವ ಬಯಲ ರಂಗ ಮಂದಿರಕ್ಕೆ ಬಳ್ಳಾರಿ ರಾಘವರ ಹೆಸರು ಇಡಲು ಸರ್ಕಾರಕ್ಕೆ ಶಿಫಾರಸು ಮಾಡಲಿದೆಂದು ಹೇಳಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಾಜೇಂದ್ರ ಕಾರಂತ ಅವರು, ಬಹು ಭಾಷೆ ಮತ್ತು ದೇಶ ವಿದೇಶಗಳಲ್ಲಿ ನಟಿಸಿದ ರಾಘವರ ಪ್ರಶಸ್ತಿ ದೊರೆತಿದ್ದು, ಅವಿಸ್ಮರಣೀಯವಾದುದು. ನಾಟಕ ನೋಡಲು ಬರುವ ಪ್ರೇಕ್ಷಕರು ಇದ್ದಾರೆ.
ರಂಗಭೂಮಿ ರಂಗ ಮಂದಿರಗಳ ಕೊರತೆ ಇದೆ. ಬೆಂಗಳೂರಿನಲ್ಲಿ ಕೇವಲ‌ ಮೂರು ಇವೆ. ನಾಟಕ ಕಲಿಯಲು‌ ಮಕ್ಕಳು ಹೋದರೆ ಹಾಳಾಗುತ್ತಾರೆಂಬ ಪೋಷಕರಲ್ಲಿನ ಭಾವನೆ ದೂರವಾಗಬೇಕು. ನಾಟಕ ಪ್ರಾಥಮಿಕ ಶಿಕ್ಷದಿಂದಲೇ ಕಲಿಸುವಂತ ಕೆಲಸ ಆಗಬೇಕು ಇದರಿಂದ ಅವರ ವಿವೇಚನಾ ಶಕ್ತಿ ಹೆಚ್ಚಲಿದೆ. ಈ ದಿಶೆಯಲ್ಲಿ ಸರ್ಕಾರ ಚಿಂತನೆ ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ರಾಘವ ಮೆಮೋರಿಯಲ್ ಅಸೋಸಿಯೇಷನ್ ಗೌರವ ಅಧ್ಯಕ್ಷ ಕೆ.ಚೆನ್ನಪ್ಪ  ಮಾತನಾಡಿ, 2008ರಿಂದ ರಾಘವ ಮೆಮೋರಿಯಲ್ ಅಸೋಸಿಯೇಷನ್ ಪ್ರತಿ ವರ್ಷ ಕನ್ನಡ ಮತ್ತು ತೆಲುಗು ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಪ್ರಶಸ್ತಿ 21 ಸಾವಿರ ನಗದು ಮತ್ತು ರಾಘವರ ಬೆಳ್ಳಿ ಪದಕ ನೆನಪಿನ ಕಾಣಿಕೆ ನೀಡಿ ಗೌರವಿಸುತ್ತಿದೆಮನದು ಹೇಳಿದರು.
ಪ್ರಶಸ್ತಿ ಪ್ರದಾನ ಸಮಾರಂಭದ ನಂತರ  ರಾಜೇಂದ್ರ ಕಾರಂತರ ನಿರ್ದೇಶನದಲ್ಲಿ “ಮರಣ ಮೃದಂಗ” ನಾಟಕ ಪ್ರದರ್ಶನಗೊಂಡಿತು.‌
ಶನಿವಾರ ಆ.3ರಂದು ಸಂಜೆ 6 ಗಂಟೆಗೆ ನಡೆಯುವ ಸಮಾರಂಭದ ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಾ. ಮಂಜುಳಾ ಚೆಲ್ಲೂರು ಹಾಗೂ ಆಂಧ್ರಪ್ರದೇಶದ ಖ್ಯಾತನಟ ವಾಡೇವು ಸುಂದರರಾವ್‌ ಭಾಗವಹಿಸುವರು. ರಾಘವ ಮೆಮೋರಿಯಲ್ ಅಸೋಸಿಯೇಷನ್ ಅಧ್ಯಕ್ಷ ಕೆ.ಕೋಟೇಶ್ವರ ರಾವ್‌ ಅಧ್ಯಕ್ಷತೆ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು