8:48 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ರಾಘವೇಂದ್ರ ಸ್ವಾಮಿ ಮಠದಲ್ಲಿ 350ನೇ ಉತ್ತರಾಧನೆ ಸಂಭ್ರಮ: ರಥೋತ್ಸವ ಸಂಪನ್ನ

25/08/2021, 23:10

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
ರಾಯಚೂರು
info.reporterkarnataka@gmail.com

ಮಸ್ಕಿ ಸಮೀಪದ ಮುದುಗಲ್ ಪಟ್ಟಣದ       ಬೇಡಿದ ಭಕ್ತರಿಗೆ ಇಷ್ಟಾರ್ಥ ವನ್ನು ಕರುಣಿಸುವ ಕಲಿಯುಗದ ಕಲ್ಪವೃಕ್ಷ, ತೃತೀಯ ಮಂತ್ರಾಲಯವೆಂದೇ ಕರೆಯಲ್ಪಡುವ ಮುದಗಲ್ಲ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 350 ನೇ ಉತ್ತರಾಧನೆ ರಥೋತ್ಸವದ ಸಂಭ್ರಮ ಜರುಗಿತು.

ಏಳು ದಿನಗಳ ಕಾಲ ಗುರುರಾಯರ ಆರಾಧನೆಯ ಬುಧವಾರದಂದು ಉತ್ತರಾಧನೆ ಶ್ರದ್ಧಾ ಭಕ್ತಿಯೊಂದಿಗೆ ಬೆಳಗ್ಗೆ ಅಷ್ಟೋತ್ತರ ಕಾರ್ಯಕ್ರಮದಿಂದ ಪ್ರಾರಂಭವಾಗಿ ರಾಯರ ಬೃಂದಾವನಕ್ಕೆ ವಿಶೇಷ ಪೂಜೆ, ಅಲಂಕಾರ ಸೇವೆ, ರಥೋತ್ಸವಕ್ಕೆ ಮುನ್ನ ಪ್ರಹ್ಲಾದರಾಜರ ಉತ್ಸವ ಮೂರ್ತಿಯ ಪಲ್ಲಕ್ಕಿ ಸೇವೆ, ತೋಟ್ಟಿಲು ಸೇವೆ ಕಾರ್ಯಕ್ರಮ ನೆರವೇರಿತು. 

ಕೋವಿಡ್ ನಿಯಮಾನುಸಾರವಾಗಿ  ಗುರುರಾಯರ ಆರಾಧನೆ ಜರುಗಿತು. ರಥೋತ್ಸವುದ್ದಕ್ಕೂ ಭಕ್ತರು ದೇವರ ನಾಮ ಸ್ಮರಣೆ ಹಾಡುಗಳು, ಭಜನೆ, ಕೋಲಾಟ ದೊಂದಿಗೆ ವಿಜ್ರಂಭಣೆಯಿಂದ ಆರಾಧನೆ ಜರುಗಿತು.

ಆರಾಧನೆಯ ನಿಮಿತ್ಯವಾಗಿ ಭಕ್ತರಿಗೆ ವಿಶೇಷ ಗೌರವ ಆಶಿರ್ವಾದ ನೀಡಲಾಯಿತು. ಈ ಸಂದರ್ಭದಲ್ಲಿ ಮಠದ ಅರ್ಚಕ ಮಧ್ವಾಚಾರ್ಯ ಸಾನಿಧ್ಯದಲ್ಲಿ ಅನಂತಾಚಾರ್ಯ, 

ಮಠದ ಅದ್ಯಕ್ಷ ನಾರಾಯಣರಾವ್ ದೇಶಪಾಂಡೆ, ನರಸಿಂಗರಾವ್ ದೇಶಪಾಂಡೆ, ಡಾ. ಗುರುರಾಜ ದೇಶಪಾಂಡೆ, ಕರ್ಣಾಟಕ ಬ್ಯಾಂಕ್‌ನ ಶ್ರೀನಿವಾಸ ದೇಶಪಾಂಡೆ, ಡಾ. ಎಂ.ವಿ. ಜೋಶಿ, ನಿವೃತ್ತ ಶಿಕ್ಷಕರಾದ ರಂಗರಾವ್ ದೇಶಪಾಂಡೆ, ವಿ.ಎಸ್. ಶೆಡ್ಲಿಗೇರಿ, ಪಾಲಾಕ್ಷಿರಾವ್ ದೇಶಪಾಂಡೆ, ಪ್ರಾಣೇಶರಾವ್ ಮುತಾಲಿಕ, ಗುರುರಾಜ ದೇಶಪಾಂಡೆ,  ಹಿರಿಯ ಪತ್ರಕರ್ತರಾದ ಆರ್.ವಿ. ಗುಮಾಸ್ತೆ, ಲೇಶರಾವ್ ಕುಲಕರ್ಣಿ, ಅನಂತ ರಾವ್ ದೇಶಪಾಂಡೆ, ರಾಘವೇಂದ್ರ ದೇಶಪಾಂಡೆ, ಯಲ್ಲೋಜಿರಾವ್ ಕೋರೇಕರ್, ಯೋಗೇಶಪ್ಪ ಗೌರಿಪೂರ, ನಾರಾಯಣಪ್ಪ ತಾವರಗೇರಿ, ರಾಘವೇಂದ್ರ ತಾವರಗೇರಿ ಸೇರಿದಂತೆ ವಿಪ್ರ ಸಮಾಜದ ಹಾಗೂ ಆರ್ಯ ವೈಶ್ಯ ಸಮಾಜ ಮಹಿಳೆಯರು ಸೇರಿದಂತೆ ಭಕ್ತ ಸಮೂಹ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು