2:44 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ರಾಘವೇಂದ್ರ ಸ್ವಾಮಿ ಮಠದಲ್ಲಿ 350ನೇ ಉತ್ತರಾಧನೆ ಸಂಭ್ರಮ: ರಥೋತ್ಸವ ಸಂಪನ್ನ

25/08/2021, 23:10

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
ರಾಯಚೂರು
info.reporterkarnataka@gmail.com

ಮಸ್ಕಿ ಸಮೀಪದ ಮುದುಗಲ್ ಪಟ್ಟಣದ       ಬೇಡಿದ ಭಕ್ತರಿಗೆ ಇಷ್ಟಾರ್ಥ ವನ್ನು ಕರುಣಿಸುವ ಕಲಿಯುಗದ ಕಲ್ಪವೃಕ್ಷ, ತೃತೀಯ ಮಂತ್ರಾಲಯವೆಂದೇ ಕರೆಯಲ್ಪಡುವ ಮುದಗಲ್ಲ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 350 ನೇ ಉತ್ತರಾಧನೆ ರಥೋತ್ಸವದ ಸಂಭ್ರಮ ಜರುಗಿತು.

ಏಳು ದಿನಗಳ ಕಾಲ ಗುರುರಾಯರ ಆರಾಧನೆಯ ಬುಧವಾರದಂದು ಉತ್ತರಾಧನೆ ಶ್ರದ್ಧಾ ಭಕ್ತಿಯೊಂದಿಗೆ ಬೆಳಗ್ಗೆ ಅಷ್ಟೋತ್ತರ ಕಾರ್ಯಕ್ರಮದಿಂದ ಪ್ರಾರಂಭವಾಗಿ ರಾಯರ ಬೃಂದಾವನಕ್ಕೆ ವಿಶೇಷ ಪೂಜೆ, ಅಲಂಕಾರ ಸೇವೆ, ರಥೋತ್ಸವಕ್ಕೆ ಮುನ್ನ ಪ್ರಹ್ಲಾದರಾಜರ ಉತ್ಸವ ಮೂರ್ತಿಯ ಪಲ್ಲಕ್ಕಿ ಸೇವೆ, ತೋಟ್ಟಿಲು ಸೇವೆ ಕಾರ್ಯಕ್ರಮ ನೆರವೇರಿತು. 

ಕೋವಿಡ್ ನಿಯಮಾನುಸಾರವಾಗಿ  ಗುರುರಾಯರ ಆರಾಧನೆ ಜರುಗಿತು. ರಥೋತ್ಸವುದ್ದಕ್ಕೂ ಭಕ್ತರು ದೇವರ ನಾಮ ಸ್ಮರಣೆ ಹಾಡುಗಳು, ಭಜನೆ, ಕೋಲಾಟ ದೊಂದಿಗೆ ವಿಜ್ರಂಭಣೆಯಿಂದ ಆರಾಧನೆ ಜರುಗಿತು.

ಆರಾಧನೆಯ ನಿಮಿತ್ಯವಾಗಿ ಭಕ್ತರಿಗೆ ವಿಶೇಷ ಗೌರವ ಆಶಿರ್ವಾದ ನೀಡಲಾಯಿತು. ಈ ಸಂದರ್ಭದಲ್ಲಿ ಮಠದ ಅರ್ಚಕ ಮಧ್ವಾಚಾರ್ಯ ಸಾನಿಧ್ಯದಲ್ಲಿ ಅನಂತಾಚಾರ್ಯ, 

ಮಠದ ಅದ್ಯಕ್ಷ ನಾರಾಯಣರಾವ್ ದೇಶಪಾಂಡೆ, ನರಸಿಂಗರಾವ್ ದೇಶಪಾಂಡೆ, ಡಾ. ಗುರುರಾಜ ದೇಶಪಾಂಡೆ, ಕರ್ಣಾಟಕ ಬ್ಯಾಂಕ್‌ನ ಶ್ರೀನಿವಾಸ ದೇಶಪಾಂಡೆ, ಡಾ. ಎಂ.ವಿ. ಜೋಶಿ, ನಿವೃತ್ತ ಶಿಕ್ಷಕರಾದ ರಂಗರಾವ್ ದೇಶಪಾಂಡೆ, ವಿ.ಎಸ್. ಶೆಡ್ಲಿಗೇರಿ, ಪಾಲಾಕ್ಷಿರಾವ್ ದೇಶಪಾಂಡೆ, ಪ್ರಾಣೇಶರಾವ್ ಮುತಾಲಿಕ, ಗುರುರಾಜ ದೇಶಪಾಂಡೆ,  ಹಿರಿಯ ಪತ್ರಕರ್ತರಾದ ಆರ್.ವಿ. ಗುಮಾಸ್ತೆ, ಲೇಶರಾವ್ ಕುಲಕರ್ಣಿ, ಅನಂತ ರಾವ್ ದೇಶಪಾಂಡೆ, ರಾಘವೇಂದ್ರ ದೇಶಪಾಂಡೆ, ಯಲ್ಲೋಜಿರಾವ್ ಕೋರೇಕರ್, ಯೋಗೇಶಪ್ಪ ಗೌರಿಪೂರ, ನಾರಾಯಣಪ್ಪ ತಾವರಗೇರಿ, ರಾಘವೇಂದ್ರ ತಾವರಗೇರಿ ಸೇರಿದಂತೆ ವಿಪ್ರ ಸಮಾಜದ ಹಾಗೂ ಆರ್ಯ ವೈಶ್ಯ ಸಮಾಜ ಮಹಿಳೆಯರು ಸೇರಿದಂತೆ ಭಕ್ತ ಸಮೂಹ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು