2:06 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ರಾಘವೇಂದ್ರ ಸ್ವಾಮಿ ಮಠದಲ್ಲಿ 350ನೇ ಉತ್ತರಾಧನೆ ಸಂಭ್ರಮ: ರಥೋತ್ಸವ ಸಂಪನ್ನ

25/08/2021, 23:10

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
ರಾಯಚೂರು
info.reporterkarnataka@gmail.com

ಮಸ್ಕಿ ಸಮೀಪದ ಮುದುಗಲ್ ಪಟ್ಟಣದ       ಬೇಡಿದ ಭಕ್ತರಿಗೆ ಇಷ್ಟಾರ್ಥ ವನ್ನು ಕರುಣಿಸುವ ಕಲಿಯುಗದ ಕಲ್ಪವೃಕ್ಷ, ತೃತೀಯ ಮಂತ್ರಾಲಯವೆಂದೇ ಕರೆಯಲ್ಪಡುವ ಮುದಗಲ್ಲ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 350 ನೇ ಉತ್ತರಾಧನೆ ರಥೋತ್ಸವದ ಸಂಭ್ರಮ ಜರುಗಿತು.

ಏಳು ದಿನಗಳ ಕಾಲ ಗುರುರಾಯರ ಆರಾಧನೆಯ ಬುಧವಾರದಂದು ಉತ್ತರಾಧನೆ ಶ್ರದ್ಧಾ ಭಕ್ತಿಯೊಂದಿಗೆ ಬೆಳಗ್ಗೆ ಅಷ್ಟೋತ್ತರ ಕಾರ್ಯಕ್ರಮದಿಂದ ಪ್ರಾರಂಭವಾಗಿ ರಾಯರ ಬೃಂದಾವನಕ್ಕೆ ವಿಶೇಷ ಪೂಜೆ, ಅಲಂಕಾರ ಸೇವೆ, ರಥೋತ್ಸವಕ್ಕೆ ಮುನ್ನ ಪ್ರಹ್ಲಾದರಾಜರ ಉತ್ಸವ ಮೂರ್ತಿಯ ಪಲ್ಲಕ್ಕಿ ಸೇವೆ, ತೋಟ್ಟಿಲು ಸೇವೆ ಕಾರ್ಯಕ್ರಮ ನೆರವೇರಿತು. 

ಕೋವಿಡ್ ನಿಯಮಾನುಸಾರವಾಗಿ  ಗುರುರಾಯರ ಆರಾಧನೆ ಜರುಗಿತು. ರಥೋತ್ಸವುದ್ದಕ್ಕೂ ಭಕ್ತರು ದೇವರ ನಾಮ ಸ್ಮರಣೆ ಹಾಡುಗಳು, ಭಜನೆ, ಕೋಲಾಟ ದೊಂದಿಗೆ ವಿಜ್ರಂಭಣೆಯಿಂದ ಆರಾಧನೆ ಜರುಗಿತು.

ಆರಾಧನೆಯ ನಿಮಿತ್ಯವಾಗಿ ಭಕ್ತರಿಗೆ ವಿಶೇಷ ಗೌರವ ಆಶಿರ್ವಾದ ನೀಡಲಾಯಿತು. ಈ ಸಂದರ್ಭದಲ್ಲಿ ಮಠದ ಅರ್ಚಕ ಮಧ್ವಾಚಾರ್ಯ ಸಾನಿಧ್ಯದಲ್ಲಿ ಅನಂತಾಚಾರ್ಯ, 

ಮಠದ ಅದ್ಯಕ್ಷ ನಾರಾಯಣರಾವ್ ದೇಶಪಾಂಡೆ, ನರಸಿಂಗರಾವ್ ದೇಶಪಾಂಡೆ, ಡಾ. ಗುರುರಾಜ ದೇಶಪಾಂಡೆ, ಕರ್ಣಾಟಕ ಬ್ಯಾಂಕ್‌ನ ಶ್ರೀನಿವಾಸ ದೇಶಪಾಂಡೆ, ಡಾ. ಎಂ.ವಿ. ಜೋಶಿ, ನಿವೃತ್ತ ಶಿಕ್ಷಕರಾದ ರಂಗರಾವ್ ದೇಶಪಾಂಡೆ, ವಿ.ಎಸ್. ಶೆಡ್ಲಿಗೇರಿ, ಪಾಲಾಕ್ಷಿರಾವ್ ದೇಶಪಾಂಡೆ, ಪ್ರಾಣೇಶರಾವ್ ಮುತಾಲಿಕ, ಗುರುರಾಜ ದೇಶಪಾಂಡೆ,  ಹಿರಿಯ ಪತ್ರಕರ್ತರಾದ ಆರ್.ವಿ. ಗುಮಾಸ್ತೆ, ಲೇಶರಾವ್ ಕುಲಕರ್ಣಿ, ಅನಂತ ರಾವ್ ದೇಶಪಾಂಡೆ, ರಾಘವೇಂದ್ರ ದೇಶಪಾಂಡೆ, ಯಲ್ಲೋಜಿರಾವ್ ಕೋರೇಕರ್, ಯೋಗೇಶಪ್ಪ ಗೌರಿಪೂರ, ನಾರಾಯಣಪ್ಪ ತಾವರಗೇರಿ, ರಾಘವೇಂದ್ರ ತಾವರಗೇರಿ ಸೇರಿದಂತೆ ವಿಪ್ರ ಸಮಾಜದ ಹಾಗೂ ಆರ್ಯ ವೈಶ್ಯ ಸಮಾಜ ಮಹಿಳೆಯರು ಸೇರಿದಂತೆ ಭಕ್ತ ಸಮೂಹ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು