3:27 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ರಾಘವೇಂದ್ರ ಸ್ವಾಮಿ ಮಠದಲ್ಲಿ 350ನೇ ಉತ್ತರಾಧನೆ ಸಂಭ್ರಮ: ರಥೋತ್ಸವ ಸಂಪನ್ನ

25/08/2021, 23:10

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
ರಾಯಚೂರು
info.reporterkarnataka@gmail.com

ಮಸ್ಕಿ ಸಮೀಪದ ಮುದುಗಲ್ ಪಟ್ಟಣದ       ಬೇಡಿದ ಭಕ್ತರಿಗೆ ಇಷ್ಟಾರ್ಥ ವನ್ನು ಕರುಣಿಸುವ ಕಲಿಯುಗದ ಕಲ್ಪವೃಕ್ಷ, ತೃತೀಯ ಮಂತ್ರಾಲಯವೆಂದೇ ಕರೆಯಲ್ಪಡುವ ಮುದಗಲ್ಲ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 350 ನೇ ಉತ್ತರಾಧನೆ ರಥೋತ್ಸವದ ಸಂಭ್ರಮ ಜರುಗಿತು.

ಏಳು ದಿನಗಳ ಕಾಲ ಗುರುರಾಯರ ಆರಾಧನೆಯ ಬುಧವಾರದಂದು ಉತ್ತರಾಧನೆ ಶ್ರದ್ಧಾ ಭಕ್ತಿಯೊಂದಿಗೆ ಬೆಳಗ್ಗೆ ಅಷ್ಟೋತ್ತರ ಕಾರ್ಯಕ್ರಮದಿಂದ ಪ್ರಾರಂಭವಾಗಿ ರಾಯರ ಬೃಂದಾವನಕ್ಕೆ ವಿಶೇಷ ಪೂಜೆ, ಅಲಂಕಾರ ಸೇವೆ, ರಥೋತ್ಸವಕ್ಕೆ ಮುನ್ನ ಪ್ರಹ್ಲಾದರಾಜರ ಉತ್ಸವ ಮೂರ್ತಿಯ ಪಲ್ಲಕ್ಕಿ ಸೇವೆ, ತೋಟ್ಟಿಲು ಸೇವೆ ಕಾರ್ಯಕ್ರಮ ನೆರವೇರಿತು. 

ಕೋವಿಡ್ ನಿಯಮಾನುಸಾರವಾಗಿ  ಗುರುರಾಯರ ಆರಾಧನೆ ಜರುಗಿತು. ರಥೋತ್ಸವುದ್ದಕ್ಕೂ ಭಕ್ತರು ದೇವರ ನಾಮ ಸ್ಮರಣೆ ಹಾಡುಗಳು, ಭಜನೆ, ಕೋಲಾಟ ದೊಂದಿಗೆ ವಿಜ್ರಂಭಣೆಯಿಂದ ಆರಾಧನೆ ಜರುಗಿತು.

ಆರಾಧನೆಯ ನಿಮಿತ್ಯವಾಗಿ ಭಕ್ತರಿಗೆ ವಿಶೇಷ ಗೌರವ ಆಶಿರ್ವಾದ ನೀಡಲಾಯಿತು. ಈ ಸಂದರ್ಭದಲ್ಲಿ ಮಠದ ಅರ್ಚಕ ಮಧ್ವಾಚಾರ್ಯ ಸಾನಿಧ್ಯದಲ್ಲಿ ಅನಂತಾಚಾರ್ಯ, 

ಮಠದ ಅದ್ಯಕ್ಷ ನಾರಾಯಣರಾವ್ ದೇಶಪಾಂಡೆ, ನರಸಿಂಗರಾವ್ ದೇಶಪಾಂಡೆ, ಡಾ. ಗುರುರಾಜ ದೇಶಪಾಂಡೆ, ಕರ್ಣಾಟಕ ಬ್ಯಾಂಕ್‌ನ ಶ್ರೀನಿವಾಸ ದೇಶಪಾಂಡೆ, ಡಾ. ಎಂ.ವಿ. ಜೋಶಿ, ನಿವೃತ್ತ ಶಿಕ್ಷಕರಾದ ರಂಗರಾವ್ ದೇಶಪಾಂಡೆ, ವಿ.ಎಸ್. ಶೆಡ್ಲಿಗೇರಿ, ಪಾಲಾಕ್ಷಿರಾವ್ ದೇಶಪಾಂಡೆ, ಪ್ರಾಣೇಶರಾವ್ ಮುತಾಲಿಕ, ಗುರುರಾಜ ದೇಶಪಾಂಡೆ,  ಹಿರಿಯ ಪತ್ರಕರ್ತರಾದ ಆರ್.ವಿ. ಗುಮಾಸ್ತೆ, ಲೇಶರಾವ್ ಕುಲಕರ್ಣಿ, ಅನಂತ ರಾವ್ ದೇಶಪಾಂಡೆ, ರಾಘವೇಂದ್ರ ದೇಶಪಾಂಡೆ, ಯಲ್ಲೋಜಿರಾವ್ ಕೋರೇಕರ್, ಯೋಗೇಶಪ್ಪ ಗೌರಿಪೂರ, ನಾರಾಯಣಪ್ಪ ತಾವರಗೇರಿ, ರಾಘವೇಂದ್ರ ತಾವರಗೇರಿ ಸೇರಿದಂತೆ ವಿಪ್ರ ಸಮಾಜದ ಹಾಗೂ ಆರ್ಯ ವೈಶ್ಯ ಸಮಾಜ ಮಹಿಳೆಯರು ಸೇರಿದಂತೆ ಭಕ್ತ ಸಮೂಹ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು