9:02 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

ರಾಘವೇಂದ್ರ ಸ್ವಾಮಿ ಮಠದಲ್ಲಿ 350ನೇ ಉತ್ತರಾಧನೆ ಸಂಭ್ರಮ: ರಥೋತ್ಸವ ಸಂಪನ್ನ

25/08/2021, 23:10

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
ರಾಯಚೂರು
info.reporterkarnataka@gmail.com

ಮಸ್ಕಿ ಸಮೀಪದ ಮುದುಗಲ್ ಪಟ್ಟಣದ       ಬೇಡಿದ ಭಕ್ತರಿಗೆ ಇಷ್ಟಾರ್ಥ ವನ್ನು ಕರುಣಿಸುವ ಕಲಿಯುಗದ ಕಲ್ಪವೃಕ್ಷ, ತೃತೀಯ ಮಂತ್ರಾಲಯವೆಂದೇ ಕರೆಯಲ್ಪಡುವ ಮುದಗಲ್ಲ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 350 ನೇ ಉತ್ತರಾಧನೆ ರಥೋತ್ಸವದ ಸಂಭ್ರಮ ಜರುಗಿತು.

ಏಳು ದಿನಗಳ ಕಾಲ ಗುರುರಾಯರ ಆರಾಧನೆಯ ಬುಧವಾರದಂದು ಉತ್ತರಾಧನೆ ಶ್ರದ್ಧಾ ಭಕ್ತಿಯೊಂದಿಗೆ ಬೆಳಗ್ಗೆ ಅಷ್ಟೋತ್ತರ ಕಾರ್ಯಕ್ರಮದಿಂದ ಪ್ರಾರಂಭವಾಗಿ ರಾಯರ ಬೃಂದಾವನಕ್ಕೆ ವಿಶೇಷ ಪೂಜೆ, ಅಲಂಕಾರ ಸೇವೆ, ರಥೋತ್ಸವಕ್ಕೆ ಮುನ್ನ ಪ್ರಹ್ಲಾದರಾಜರ ಉತ್ಸವ ಮೂರ್ತಿಯ ಪಲ್ಲಕ್ಕಿ ಸೇವೆ, ತೋಟ್ಟಿಲು ಸೇವೆ ಕಾರ್ಯಕ್ರಮ ನೆರವೇರಿತು. 

ಕೋವಿಡ್ ನಿಯಮಾನುಸಾರವಾಗಿ  ಗುರುರಾಯರ ಆರಾಧನೆ ಜರುಗಿತು. ರಥೋತ್ಸವುದ್ದಕ್ಕೂ ಭಕ್ತರು ದೇವರ ನಾಮ ಸ್ಮರಣೆ ಹಾಡುಗಳು, ಭಜನೆ, ಕೋಲಾಟ ದೊಂದಿಗೆ ವಿಜ್ರಂಭಣೆಯಿಂದ ಆರಾಧನೆ ಜರುಗಿತು.

ಆರಾಧನೆಯ ನಿಮಿತ್ಯವಾಗಿ ಭಕ್ತರಿಗೆ ವಿಶೇಷ ಗೌರವ ಆಶಿರ್ವಾದ ನೀಡಲಾಯಿತು. ಈ ಸಂದರ್ಭದಲ್ಲಿ ಮಠದ ಅರ್ಚಕ ಮಧ್ವಾಚಾರ್ಯ ಸಾನಿಧ್ಯದಲ್ಲಿ ಅನಂತಾಚಾರ್ಯ, 

ಮಠದ ಅದ್ಯಕ್ಷ ನಾರಾಯಣರಾವ್ ದೇಶಪಾಂಡೆ, ನರಸಿಂಗರಾವ್ ದೇಶಪಾಂಡೆ, ಡಾ. ಗುರುರಾಜ ದೇಶಪಾಂಡೆ, ಕರ್ಣಾಟಕ ಬ್ಯಾಂಕ್‌ನ ಶ್ರೀನಿವಾಸ ದೇಶಪಾಂಡೆ, ಡಾ. ಎಂ.ವಿ. ಜೋಶಿ, ನಿವೃತ್ತ ಶಿಕ್ಷಕರಾದ ರಂಗರಾವ್ ದೇಶಪಾಂಡೆ, ವಿ.ಎಸ್. ಶೆಡ್ಲಿಗೇರಿ, ಪಾಲಾಕ್ಷಿರಾವ್ ದೇಶಪಾಂಡೆ, ಪ್ರಾಣೇಶರಾವ್ ಮುತಾಲಿಕ, ಗುರುರಾಜ ದೇಶಪಾಂಡೆ,  ಹಿರಿಯ ಪತ್ರಕರ್ತರಾದ ಆರ್.ವಿ. ಗುಮಾಸ್ತೆ, ಲೇಶರಾವ್ ಕುಲಕರ್ಣಿ, ಅನಂತ ರಾವ್ ದೇಶಪಾಂಡೆ, ರಾಘವೇಂದ್ರ ದೇಶಪಾಂಡೆ, ಯಲ್ಲೋಜಿರಾವ್ ಕೋರೇಕರ್, ಯೋಗೇಶಪ್ಪ ಗೌರಿಪೂರ, ನಾರಾಯಣಪ್ಪ ತಾವರಗೇರಿ, ರಾಘವೇಂದ್ರ ತಾವರಗೇರಿ ಸೇರಿದಂತೆ ವಿಪ್ರ ಸಮಾಜದ ಹಾಗೂ ಆರ್ಯ ವೈಶ್ಯ ಸಮಾಜ ಮಹಿಳೆಯರು ಸೇರಿದಂತೆ ಭಕ್ತ ಸಮೂಹ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು