7:13 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ರಾಹುಲ್ ಗಾಂಧಿ ಹಿಂದುತ್ವವನ್ನು ಟೀಕಿಸಿಲ್ಲ, ಅವರು ಮಾತನಾಡಿದ್ದು ಬಿಜೆಪಿ ಹಿಂದುತ್ವ ಬಗ್ಗೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

10/07/2024, 18:02

ಮಂಗಳೂರು(reporterkarnataka.com): ಶಂಕರಾಚಾರ್ಯ ಮಠದ ಪೀಠಾಧಿಪತಿಗಳು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಭಾಷಣದಲ್ಲಿ ಯಾವುದೇ ಹಿಂಸಾಚಾರದ ವಿಚಾರಗಳು ಇಲ್ಲ ಎಂದು ಹೇಳಿಕೆ ನೀಡಿದ ಮೇಲೂ ಶಾಸಕ ಡಾ. ಭರತ್ ಶೆಟ್ಟಿ ಯವರು ಅದರ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದರೆ ಇವರು ಪೀಠಾಧಿಪತಿಗಳ ವಿರೋಧಿಗಳಲ್ಲವೇ..? ಇವರು ಹಿಂದೂ ಪೀಠಾಧಿಪತಿಗಳ ವಿರೋಧಿಯೇ?
ರಾಹುಲ್ ಗಾಂಧಿಯವರು ದೇಶದಾದ್ಯಂತ ಸಂಘಪರಿವಾರ , ಬಿಜೆಪಿ ಹಿಂದುತ್ವದ ಸಿದ್ಧಾಂತದ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಕಟುವಾಗಿ ಟೀಕಿಸಿದ್ದಾರೆಯೇ ಹೊರತು ಹಿಂದೂ ಧರ್ಮ , ಹಿಂದೂಗಳನ್ನು ಟೀಕೆ ಮಾಡಿಲ್ಲ.
ಓರ್ವ ಶಾಸಕನಾಗಿ ಲೋಕಸಭಾ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿಯವರನ್ನು ಏಕವಚನದಲ್ಲಿ ಲೋಕಸಭೆಗೆ ನುಗ್ಗಿ ಕಪಾಲಕ್ಕೆ ಭಾರಿಸಬೇಕು ಎಂದು ಬಹಿರಂಗವಾಗಿ ಬೆದರಿಕೆ ಹಾಕಿರುವುದು ಬಿಜೆಪಿಯ ಹಿಂಸಾಚಾರಕ್ಕೆ ಉತ್ತಮ ಉದಾಹರಣೆಯಾಗಿದೆ. ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದಾಗ ಸಂಘಪರಿವಾರ , ಬಿಜೆಪಿಯ ಹಿಂಸಾಚಾರ ರಾಜಕೀಯವನ್ನು ಬಹಿರಂಗವಾಗಿ ಟೀಕಿಸಿದ್ದ ಭರತ್ ಶೆಟ್ಟಿ ಬಿಜೆಪಿ ಪಕ್ಷ ಸೇರಿ ಶಾಸಕರಾದ ಬಳಿಕ ಭಯಂಕರ ಹಿಂದುತ್ವವಾದಿಯಾಗಿದ್ದರೆ. ಜೆಡಿಎಸ್ ಪಕ್ಷದಲ್ಲಿದ್ದಾಗ ತನ್ನ ಹಿಂದಿನ ಮಾತನ್ನು ಭರತ್ ಶೆಟ್ಟಿ ಯವರು ಒಮ್ಮೆ ಯೋಚಿಸುವ ಅಗತ್ಯವಿದೆ. ಭರತ್ ಶೆಟ್ಟಿ ಎರಡೂ ನಾಲಿಗೆಯ ಹಾವಿನಂತೆ ವರ್ತಿಸುವ ಬದಲಾಗಿ ಸಂಘಪರಿವಾರ , ಬಿಜೆಪಿಯ ಹಿಂಸಾಚಾರದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಂಘಪರಿವಾರ , ಬಿಜೆಪಿ ಕಾರ್ಯಕರ್ತರ ಮನೆಗೆ ತೆರಳಿ ಅವರ ಮನೆಯ ಪರಿಸ್ಥಿತಿಯನ್ನು ಒಮ್ಮೆ ಅವಲೋಕನ ಮಾಡಿದರೆ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ಮಾಡಿದ ಭಾಷಣದ ನಿಜವಾದ ಸ್ವರೂಪ ಅರ್ಥವಾಗುತ್ತದೆ ಎಂದು ಅವರು ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು