1:44 PM Monday23 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ರಾಹುಲ್ ಗಾಂಧಿ ಹಿಂದುತ್ವವನ್ನು ಟೀಕಿಸಿಲ್ಲ, ಅವರು ಮಾತನಾಡಿದ್ದು ಬಿಜೆಪಿ ಹಿಂದುತ್ವ ಬಗ್ಗೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

10/07/2024, 18:02

ಮಂಗಳೂರು(reporterkarnataka.com): ಶಂಕರಾಚಾರ್ಯ ಮಠದ ಪೀಠಾಧಿಪತಿಗಳು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಭಾಷಣದಲ್ಲಿ ಯಾವುದೇ ಹಿಂಸಾಚಾರದ ವಿಚಾರಗಳು ಇಲ್ಲ ಎಂದು ಹೇಳಿಕೆ ನೀಡಿದ ಮೇಲೂ ಶಾಸಕ ಡಾ. ಭರತ್ ಶೆಟ್ಟಿ ಯವರು ಅದರ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದರೆ ಇವರು ಪೀಠಾಧಿಪತಿಗಳ ವಿರೋಧಿಗಳಲ್ಲವೇ..? ಇವರು ಹಿಂದೂ ಪೀಠಾಧಿಪತಿಗಳ ವಿರೋಧಿಯೇ?
ರಾಹುಲ್ ಗಾಂಧಿಯವರು ದೇಶದಾದ್ಯಂತ ಸಂಘಪರಿವಾರ , ಬಿಜೆಪಿ ಹಿಂದುತ್ವದ ಸಿದ್ಧಾಂತದ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಕಟುವಾಗಿ ಟೀಕಿಸಿದ್ದಾರೆಯೇ ಹೊರತು ಹಿಂದೂ ಧರ್ಮ , ಹಿಂದೂಗಳನ್ನು ಟೀಕೆ ಮಾಡಿಲ್ಲ.
ಓರ್ವ ಶಾಸಕನಾಗಿ ಲೋಕಸಭಾ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿಯವರನ್ನು ಏಕವಚನದಲ್ಲಿ ಲೋಕಸಭೆಗೆ ನುಗ್ಗಿ ಕಪಾಲಕ್ಕೆ ಭಾರಿಸಬೇಕು ಎಂದು ಬಹಿರಂಗವಾಗಿ ಬೆದರಿಕೆ ಹಾಕಿರುವುದು ಬಿಜೆಪಿಯ ಹಿಂಸಾಚಾರಕ್ಕೆ ಉತ್ತಮ ಉದಾಹರಣೆಯಾಗಿದೆ. ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದಾಗ ಸಂಘಪರಿವಾರ , ಬಿಜೆಪಿಯ ಹಿಂಸಾಚಾರ ರಾಜಕೀಯವನ್ನು ಬಹಿರಂಗವಾಗಿ ಟೀಕಿಸಿದ್ದ ಭರತ್ ಶೆಟ್ಟಿ ಬಿಜೆಪಿ ಪಕ್ಷ ಸೇರಿ ಶಾಸಕರಾದ ಬಳಿಕ ಭಯಂಕರ ಹಿಂದುತ್ವವಾದಿಯಾಗಿದ್ದರೆ. ಜೆಡಿಎಸ್ ಪಕ್ಷದಲ್ಲಿದ್ದಾಗ ತನ್ನ ಹಿಂದಿನ ಮಾತನ್ನು ಭರತ್ ಶೆಟ್ಟಿ ಯವರು ಒಮ್ಮೆ ಯೋಚಿಸುವ ಅಗತ್ಯವಿದೆ. ಭರತ್ ಶೆಟ್ಟಿ ಎರಡೂ ನಾಲಿಗೆಯ ಹಾವಿನಂತೆ ವರ್ತಿಸುವ ಬದಲಾಗಿ ಸಂಘಪರಿವಾರ , ಬಿಜೆಪಿಯ ಹಿಂಸಾಚಾರದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಂಘಪರಿವಾರ , ಬಿಜೆಪಿ ಕಾರ್ಯಕರ್ತರ ಮನೆಗೆ ತೆರಳಿ ಅವರ ಮನೆಯ ಪರಿಸ್ಥಿತಿಯನ್ನು ಒಮ್ಮೆ ಅವಲೋಕನ ಮಾಡಿದರೆ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ಮಾಡಿದ ಭಾಷಣದ ನಿಜವಾದ ಸ್ವರೂಪ ಅರ್ಥವಾಗುತ್ತದೆ ಎಂದು ಅವರು ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು