9:32 AM Saturday6 - December 2025
ಬ್ರೇಕಿಂಗ್ ನ್ಯೂಸ್
ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು

ಇತ್ತೀಚಿನ ಸುದ್ದಿ

ರಾಹುಲ್ ಗಾಂಧಿ ಹಿಂದುತ್ವವನ್ನು ಟೀಕಿಸಿಲ್ಲ, ಅವರು ಮಾತನಾಡಿದ್ದು ಬಿಜೆಪಿ ಹಿಂದುತ್ವ ಬಗ್ಗೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

10/07/2024, 18:02

ಮಂಗಳೂರು(reporterkarnataka.com): ಶಂಕರಾಚಾರ್ಯ ಮಠದ ಪೀಠಾಧಿಪತಿಗಳು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಭಾಷಣದಲ್ಲಿ ಯಾವುದೇ ಹಿಂಸಾಚಾರದ ವಿಚಾರಗಳು ಇಲ್ಲ ಎಂದು ಹೇಳಿಕೆ ನೀಡಿದ ಮೇಲೂ ಶಾಸಕ ಡಾ. ಭರತ್ ಶೆಟ್ಟಿ ಯವರು ಅದರ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದರೆ ಇವರು ಪೀಠಾಧಿಪತಿಗಳ ವಿರೋಧಿಗಳಲ್ಲವೇ..? ಇವರು ಹಿಂದೂ ಪೀಠಾಧಿಪತಿಗಳ ವಿರೋಧಿಯೇ?
ರಾಹುಲ್ ಗಾಂಧಿಯವರು ದೇಶದಾದ್ಯಂತ ಸಂಘಪರಿವಾರ , ಬಿಜೆಪಿ ಹಿಂದುತ್ವದ ಸಿದ್ಧಾಂತದ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಕಟುವಾಗಿ ಟೀಕಿಸಿದ್ದಾರೆಯೇ ಹೊರತು ಹಿಂದೂ ಧರ್ಮ , ಹಿಂದೂಗಳನ್ನು ಟೀಕೆ ಮಾಡಿಲ್ಲ.
ಓರ್ವ ಶಾಸಕನಾಗಿ ಲೋಕಸಭಾ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿಯವರನ್ನು ಏಕವಚನದಲ್ಲಿ ಲೋಕಸಭೆಗೆ ನುಗ್ಗಿ ಕಪಾಲಕ್ಕೆ ಭಾರಿಸಬೇಕು ಎಂದು ಬಹಿರಂಗವಾಗಿ ಬೆದರಿಕೆ ಹಾಕಿರುವುದು ಬಿಜೆಪಿಯ ಹಿಂಸಾಚಾರಕ್ಕೆ ಉತ್ತಮ ಉದಾಹರಣೆಯಾಗಿದೆ. ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದಾಗ ಸಂಘಪರಿವಾರ , ಬಿಜೆಪಿಯ ಹಿಂಸಾಚಾರ ರಾಜಕೀಯವನ್ನು ಬಹಿರಂಗವಾಗಿ ಟೀಕಿಸಿದ್ದ ಭರತ್ ಶೆಟ್ಟಿ ಬಿಜೆಪಿ ಪಕ್ಷ ಸೇರಿ ಶಾಸಕರಾದ ಬಳಿಕ ಭಯಂಕರ ಹಿಂದುತ್ವವಾದಿಯಾಗಿದ್ದರೆ. ಜೆಡಿಎಸ್ ಪಕ್ಷದಲ್ಲಿದ್ದಾಗ ತನ್ನ ಹಿಂದಿನ ಮಾತನ್ನು ಭರತ್ ಶೆಟ್ಟಿ ಯವರು ಒಮ್ಮೆ ಯೋಚಿಸುವ ಅಗತ್ಯವಿದೆ. ಭರತ್ ಶೆಟ್ಟಿ ಎರಡೂ ನಾಲಿಗೆಯ ಹಾವಿನಂತೆ ವರ್ತಿಸುವ ಬದಲಾಗಿ ಸಂಘಪರಿವಾರ , ಬಿಜೆಪಿಯ ಹಿಂಸಾಚಾರದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಂಘಪರಿವಾರ , ಬಿಜೆಪಿ ಕಾರ್ಯಕರ್ತರ ಮನೆಗೆ ತೆರಳಿ ಅವರ ಮನೆಯ ಪರಿಸ್ಥಿತಿಯನ್ನು ಒಮ್ಮೆ ಅವಲೋಕನ ಮಾಡಿದರೆ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ಮಾಡಿದ ಭಾಷಣದ ನಿಜವಾದ ಸ್ವರೂಪ ಅರ್ಥವಾಗುತ್ತದೆ ಎಂದು ಅವರು ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು