8:32 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ರಾಹುಲ್ ಗಾಂಧಿ ಹಿಂದುತ್ವವನ್ನು ಟೀಕಿಸಿಲ್ಲ, ಅವರು ಮಾತನಾಡಿದ್ದು ಬಿಜೆಪಿ ಹಿಂದುತ್ವ ಬಗ್ಗೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

10/07/2024, 18:02

ಮಂಗಳೂರು(reporterkarnataka.com): ಶಂಕರಾಚಾರ್ಯ ಮಠದ ಪೀಠಾಧಿಪತಿಗಳು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಭಾಷಣದಲ್ಲಿ ಯಾವುದೇ ಹಿಂಸಾಚಾರದ ವಿಚಾರಗಳು ಇಲ್ಲ ಎಂದು ಹೇಳಿಕೆ ನೀಡಿದ ಮೇಲೂ ಶಾಸಕ ಡಾ. ಭರತ್ ಶೆಟ್ಟಿ ಯವರು ಅದರ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದರೆ ಇವರು ಪೀಠಾಧಿಪತಿಗಳ ವಿರೋಧಿಗಳಲ್ಲವೇ..? ಇವರು ಹಿಂದೂ ಪೀಠಾಧಿಪತಿಗಳ ವಿರೋಧಿಯೇ?
ರಾಹುಲ್ ಗಾಂಧಿಯವರು ದೇಶದಾದ್ಯಂತ ಸಂಘಪರಿವಾರ , ಬಿಜೆಪಿ ಹಿಂದುತ್ವದ ಸಿದ್ಧಾಂತದ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಕಟುವಾಗಿ ಟೀಕಿಸಿದ್ದಾರೆಯೇ ಹೊರತು ಹಿಂದೂ ಧರ್ಮ , ಹಿಂದೂಗಳನ್ನು ಟೀಕೆ ಮಾಡಿಲ್ಲ.
ಓರ್ವ ಶಾಸಕನಾಗಿ ಲೋಕಸಭಾ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿಯವರನ್ನು ಏಕವಚನದಲ್ಲಿ ಲೋಕಸಭೆಗೆ ನುಗ್ಗಿ ಕಪಾಲಕ್ಕೆ ಭಾರಿಸಬೇಕು ಎಂದು ಬಹಿರಂಗವಾಗಿ ಬೆದರಿಕೆ ಹಾಕಿರುವುದು ಬಿಜೆಪಿಯ ಹಿಂಸಾಚಾರಕ್ಕೆ ಉತ್ತಮ ಉದಾಹರಣೆಯಾಗಿದೆ. ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದಾಗ ಸಂಘಪರಿವಾರ , ಬಿಜೆಪಿಯ ಹಿಂಸಾಚಾರ ರಾಜಕೀಯವನ್ನು ಬಹಿರಂಗವಾಗಿ ಟೀಕಿಸಿದ್ದ ಭರತ್ ಶೆಟ್ಟಿ ಬಿಜೆಪಿ ಪಕ್ಷ ಸೇರಿ ಶಾಸಕರಾದ ಬಳಿಕ ಭಯಂಕರ ಹಿಂದುತ್ವವಾದಿಯಾಗಿದ್ದರೆ. ಜೆಡಿಎಸ್ ಪಕ್ಷದಲ್ಲಿದ್ದಾಗ ತನ್ನ ಹಿಂದಿನ ಮಾತನ್ನು ಭರತ್ ಶೆಟ್ಟಿ ಯವರು ಒಮ್ಮೆ ಯೋಚಿಸುವ ಅಗತ್ಯವಿದೆ. ಭರತ್ ಶೆಟ್ಟಿ ಎರಡೂ ನಾಲಿಗೆಯ ಹಾವಿನಂತೆ ವರ್ತಿಸುವ ಬದಲಾಗಿ ಸಂಘಪರಿವಾರ , ಬಿಜೆಪಿಯ ಹಿಂಸಾಚಾರದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಂಘಪರಿವಾರ , ಬಿಜೆಪಿ ಕಾರ್ಯಕರ್ತರ ಮನೆಗೆ ತೆರಳಿ ಅವರ ಮನೆಯ ಪರಿಸ್ಥಿತಿಯನ್ನು ಒಮ್ಮೆ ಅವಲೋಕನ ಮಾಡಿದರೆ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ಮಾಡಿದ ಭಾಷಣದ ನಿಜವಾದ ಸ್ವರೂಪ ಅರ್ಥವಾಗುತ್ತದೆ ಎಂದು ಅವರು ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು