12:56 AM Friday22 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ…

ಇತ್ತೀಚಿನ ಸುದ್ದಿ

ರಾಹುಲ್ ಗಾಂಧಿ ಹಿಂದುತ್ವವನ್ನು ಟೀಕಿಸಿಲ್ಲ, ಅವರು ಮಾತನಾಡಿದ್ದು ಬಿಜೆಪಿ ಹಿಂದುತ್ವ ಬಗ್ಗೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

10/07/2024, 18:02

ಮಂಗಳೂರು(reporterkarnataka.com): ಶಂಕರಾಚಾರ್ಯ ಮಠದ ಪೀಠಾಧಿಪತಿಗಳು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಭಾಷಣದಲ್ಲಿ ಯಾವುದೇ ಹಿಂಸಾಚಾರದ ವಿಚಾರಗಳು ಇಲ್ಲ ಎಂದು ಹೇಳಿಕೆ ನೀಡಿದ ಮೇಲೂ ಶಾಸಕ ಡಾ. ಭರತ್ ಶೆಟ್ಟಿ ಯವರು ಅದರ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದರೆ ಇವರು ಪೀಠಾಧಿಪತಿಗಳ ವಿರೋಧಿಗಳಲ್ಲವೇ..? ಇವರು ಹಿಂದೂ ಪೀಠಾಧಿಪತಿಗಳ ವಿರೋಧಿಯೇ?
ರಾಹುಲ್ ಗಾಂಧಿಯವರು ದೇಶದಾದ್ಯಂತ ಸಂಘಪರಿವಾರ , ಬಿಜೆಪಿ ಹಿಂದುತ್ವದ ಸಿದ್ಧಾಂತದ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಕಟುವಾಗಿ ಟೀಕಿಸಿದ್ದಾರೆಯೇ ಹೊರತು ಹಿಂದೂ ಧರ್ಮ , ಹಿಂದೂಗಳನ್ನು ಟೀಕೆ ಮಾಡಿಲ್ಲ.
ಓರ್ವ ಶಾಸಕನಾಗಿ ಲೋಕಸಭಾ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿಯವರನ್ನು ಏಕವಚನದಲ್ಲಿ ಲೋಕಸಭೆಗೆ ನುಗ್ಗಿ ಕಪಾಲಕ್ಕೆ ಭಾರಿಸಬೇಕು ಎಂದು ಬಹಿರಂಗವಾಗಿ ಬೆದರಿಕೆ ಹಾಕಿರುವುದು ಬಿಜೆಪಿಯ ಹಿಂಸಾಚಾರಕ್ಕೆ ಉತ್ತಮ ಉದಾಹರಣೆಯಾಗಿದೆ. ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದಾಗ ಸಂಘಪರಿವಾರ , ಬಿಜೆಪಿಯ ಹಿಂಸಾಚಾರ ರಾಜಕೀಯವನ್ನು ಬಹಿರಂಗವಾಗಿ ಟೀಕಿಸಿದ್ದ ಭರತ್ ಶೆಟ್ಟಿ ಬಿಜೆಪಿ ಪಕ್ಷ ಸೇರಿ ಶಾಸಕರಾದ ಬಳಿಕ ಭಯಂಕರ ಹಿಂದುತ್ವವಾದಿಯಾಗಿದ್ದರೆ. ಜೆಡಿಎಸ್ ಪಕ್ಷದಲ್ಲಿದ್ದಾಗ ತನ್ನ ಹಿಂದಿನ ಮಾತನ್ನು ಭರತ್ ಶೆಟ್ಟಿ ಯವರು ಒಮ್ಮೆ ಯೋಚಿಸುವ ಅಗತ್ಯವಿದೆ. ಭರತ್ ಶೆಟ್ಟಿ ಎರಡೂ ನಾಲಿಗೆಯ ಹಾವಿನಂತೆ ವರ್ತಿಸುವ ಬದಲಾಗಿ ಸಂಘಪರಿವಾರ , ಬಿಜೆಪಿಯ ಹಿಂಸಾಚಾರದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಂಘಪರಿವಾರ , ಬಿಜೆಪಿ ಕಾರ್ಯಕರ್ತರ ಮನೆಗೆ ತೆರಳಿ ಅವರ ಮನೆಯ ಪರಿಸ್ಥಿತಿಯನ್ನು ಒಮ್ಮೆ ಅವಲೋಕನ ಮಾಡಿದರೆ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ಮಾಡಿದ ಭಾಷಣದ ನಿಜವಾದ ಸ್ವರೂಪ ಅರ್ಥವಾಗುತ್ತದೆ ಎಂದು ಅವರು ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು