11:18 AM Monday16 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ರಾಹುಲ್ ಗಾಂಧಿ ಹಿಂದುತ್ವವನ್ನು ಟೀಕಿಸಿಲ್ಲ, ಅವರು ಮಾತನಾಡಿದ್ದು ಬಿಜೆಪಿ ಹಿಂದುತ್ವ ಬಗ್ಗೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

10/07/2024, 18:02

ಮಂಗಳೂರು(reporterkarnataka.com): ಶಂಕರಾಚಾರ್ಯ ಮಠದ ಪೀಠಾಧಿಪತಿಗಳು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಭಾಷಣದಲ್ಲಿ ಯಾವುದೇ ಹಿಂಸಾಚಾರದ ವಿಚಾರಗಳು ಇಲ್ಲ ಎಂದು ಹೇಳಿಕೆ ನೀಡಿದ ಮೇಲೂ ಶಾಸಕ ಡಾ. ಭರತ್ ಶೆಟ್ಟಿ ಯವರು ಅದರ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದರೆ ಇವರು ಪೀಠಾಧಿಪತಿಗಳ ವಿರೋಧಿಗಳಲ್ಲವೇ..? ಇವರು ಹಿಂದೂ ಪೀಠಾಧಿಪತಿಗಳ ವಿರೋಧಿಯೇ?
ರಾಹುಲ್ ಗಾಂಧಿಯವರು ದೇಶದಾದ್ಯಂತ ಸಂಘಪರಿವಾರ , ಬಿಜೆಪಿ ಹಿಂದುತ್ವದ ಸಿದ್ಧಾಂತದ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಕಟುವಾಗಿ ಟೀಕಿಸಿದ್ದಾರೆಯೇ ಹೊರತು ಹಿಂದೂ ಧರ್ಮ , ಹಿಂದೂಗಳನ್ನು ಟೀಕೆ ಮಾಡಿಲ್ಲ.
ಓರ್ವ ಶಾಸಕನಾಗಿ ಲೋಕಸಭಾ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿಯವರನ್ನು ಏಕವಚನದಲ್ಲಿ ಲೋಕಸಭೆಗೆ ನುಗ್ಗಿ ಕಪಾಲಕ್ಕೆ ಭಾರಿಸಬೇಕು ಎಂದು ಬಹಿರಂಗವಾಗಿ ಬೆದರಿಕೆ ಹಾಕಿರುವುದು ಬಿಜೆಪಿಯ ಹಿಂಸಾಚಾರಕ್ಕೆ ಉತ್ತಮ ಉದಾಹರಣೆಯಾಗಿದೆ. ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದಾಗ ಸಂಘಪರಿವಾರ , ಬಿಜೆಪಿಯ ಹಿಂಸಾಚಾರ ರಾಜಕೀಯವನ್ನು ಬಹಿರಂಗವಾಗಿ ಟೀಕಿಸಿದ್ದ ಭರತ್ ಶೆಟ್ಟಿ ಬಿಜೆಪಿ ಪಕ್ಷ ಸೇರಿ ಶಾಸಕರಾದ ಬಳಿಕ ಭಯಂಕರ ಹಿಂದುತ್ವವಾದಿಯಾಗಿದ್ದರೆ. ಜೆಡಿಎಸ್ ಪಕ್ಷದಲ್ಲಿದ್ದಾಗ ತನ್ನ ಹಿಂದಿನ ಮಾತನ್ನು ಭರತ್ ಶೆಟ್ಟಿ ಯವರು ಒಮ್ಮೆ ಯೋಚಿಸುವ ಅಗತ್ಯವಿದೆ. ಭರತ್ ಶೆಟ್ಟಿ ಎರಡೂ ನಾಲಿಗೆಯ ಹಾವಿನಂತೆ ವರ್ತಿಸುವ ಬದಲಾಗಿ ಸಂಘಪರಿವಾರ , ಬಿಜೆಪಿಯ ಹಿಂಸಾಚಾರದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಂಘಪರಿವಾರ , ಬಿಜೆಪಿ ಕಾರ್ಯಕರ್ತರ ಮನೆಗೆ ತೆರಳಿ ಅವರ ಮನೆಯ ಪರಿಸ್ಥಿತಿಯನ್ನು ಒಮ್ಮೆ ಅವಲೋಕನ ಮಾಡಿದರೆ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ಮಾಡಿದ ಭಾಷಣದ ನಿಜವಾದ ಸ್ವರೂಪ ಅರ್ಥವಾಗುತ್ತದೆ ಎಂದು ಅವರು ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು