1:21 AM Friday29 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ರಾಹುಲ್ ಗಾಂಧಿ ಹಿಂದುತ್ವವನ್ನು ಟೀಕಿಸಿಲ್ಲ, ಅವರು ಮಾತನಾಡಿದ್ದು ಬಿಜೆಪಿ ಹಿಂದುತ್ವ ಬಗ್ಗೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

10/07/2024, 18:02

ಮಂಗಳೂರು(reporterkarnataka.com): ಶಂಕರಾಚಾರ್ಯ ಮಠದ ಪೀಠಾಧಿಪತಿಗಳು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರ ಭಾಷಣದಲ್ಲಿ ಯಾವುದೇ ಹಿಂಸಾಚಾರದ ವಿಚಾರಗಳು ಇಲ್ಲ ಎಂದು ಹೇಳಿಕೆ ನೀಡಿದ ಮೇಲೂ ಶಾಸಕ ಡಾ. ಭರತ್ ಶೆಟ್ಟಿ ಯವರು ಅದರ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದರೆ ಇವರು ಪೀಠಾಧಿಪತಿಗಳ ವಿರೋಧಿಗಳಲ್ಲವೇ..? ಇವರು ಹಿಂದೂ ಪೀಠಾಧಿಪತಿಗಳ ವಿರೋಧಿಯೇ?
ರಾಹುಲ್ ಗಾಂಧಿಯವರು ದೇಶದಾದ್ಯಂತ ಸಂಘಪರಿವಾರ , ಬಿಜೆಪಿ ಹಿಂದುತ್ವದ ಸಿದ್ಧಾಂತದ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಕಟುವಾಗಿ ಟೀಕಿಸಿದ್ದಾರೆಯೇ ಹೊರತು ಹಿಂದೂ ಧರ್ಮ , ಹಿಂದೂಗಳನ್ನು ಟೀಕೆ ಮಾಡಿಲ್ಲ.
ಓರ್ವ ಶಾಸಕನಾಗಿ ಲೋಕಸಭಾ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿಯವರನ್ನು ಏಕವಚನದಲ್ಲಿ ಲೋಕಸಭೆಗೆ ನುಗ್ಗಿ ಕಪಾಲಕ್ಕೆ ಭಾರಿಸಬೇಕು ಎಂದು ಬಹಿರಂಗವಾಗಿ ಬೆದರಿಕೆ ಹಾಕಿರುವುದು ಬಿಜೆಪಿಯ ಹಿಂಸಾಚಾರಕ್ಕೆ ಉತ್ತಮ ಉದಾಹರಣೆಯಾಗಿದೆ. ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದಾಗ ಸಂಘಪರಿವಾರ , ಬಿಜೆಪಿಯ ಹಿಂಸಾಚಾರ ರಾಜಕೀಯವನ್ನು ಬಹಿರಂಗವಾಗಿ ಟೀಕಿಸಿದ್ದ ಭರತ್ ಶೆಟ್ಟಿ ಬಿಜೆಪಿ ಪಕ್ಷ ಸೇರಿ ಶಾಸಕರಾದ ಬಳಿಕ ಭಯಂಕರ ಹಿಂದುತ್ವವಾದಿಯಾಗಿದ್ದರೆ. ಜೆಡಿಎಸ್ ಪಕ್ಷದಲ್ಲಿದ್ದಾಗ ತನ್ನ ಹಿಂದಿನ ಮಾತನ್ನು ಭರತ್ ಶೆಟ್ಟಿ ಯವರು ಒಮ್ಮೆ ಯೋಚಿಸುವ ಅಗತ್ಯವಿದೆ. ಭರತ್ ಶೆಟ್ಟಿ ಎರಡೂ ನಾಲಿಗೆಯ ಹಾವಿನಂತೆ ವರ್ತಿಸುವ ಬದಲಾಗಿ ಸಂಘಪರಿವಾರ , ಬಿಜೆಪಿಯ ಹಿಂಸಾಚಾರದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಂಘಪರಿವಾರ , ಬಿಜೆಪಿ ಕಾರ್ಯಕರ್ತರ ಮನೆಗೆ ತೆರಳಿ ಅವರ ಮನೆಯ ಪರಿಸ್ಥಿತಿಯನ್ನು ಒಮ್ಮೆ ಅವಲೋಕನ ಮಾಡಿದರೆ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ಮಾಡಿದ ಭಾಷಣದ ನಿಜವಾದ ಸ್ವರೂಪ ಅರ್ಥವಾಗುತ್ತದೆ ಎಂದು ಅವರು ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು