4:44 AM Monday23 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ ಪಾತ್ರವೇ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

08/08/2025, 19:14

ಬೆಂಗಳೂರು(reporterkarnataka.com): ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಥವಾ ಬಿಜೆಪಿ ನಾಯಕರ ಪಾತ್ರವೇ ಇಲ್ಲ. ಇದನ್ನು ಅಧಿಕಾರಿಗಳೇ ತಯಾರು ಮಾಡುತ್ತಾರೆ. ಆದ್ದರಿಂದ ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್‌ ಗಾಂಧಿ ಬಾಂಬ್‌ ಹಾಕಿಲ್ಲ. ಅದು ಠುಸ್‌ ಪಟಾಕಿಯಾಗಿದೆ. ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರತಿ ಬೂತ್‌ಗೆ ಬಿಎಲ್‌ಎಗಳನ್ನು (ಬೂತ್‌ ಲೆವೆಲ್‌ ಏಜೆಂಟ್‌) ಕಾಂಗ್ರೆಸ್‌ ನೀಡಿದೆ. ಮತದಾರರ ಪಟ್ಟಿಯ ಮೊದಲ ಪ್ರತಿಯನ್ನು ಬಿಎಲ್‌ಎಗೆ ನೀಡಲಾಗುತ್ತದೆ. ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೇ ನೇಮಿಸಿದ್ದಾರೆ. ಮತದಾರರ ಪಟ್ಟಿಯಲ್ಲಿ ಸತ್ತವರ ಹೆಸರು ತೆಗೆದುಹಾಕುವುದು, ಹೊಸಬರನ್ನು ಸೇರಿಸುವುದು ಮೊದಲಾದ ಕೆಲಸವನ್ನು ಬಿಎಲ್‌ಎ ಮಾಡುತ್ತಾರೆ. ಇಂತಹ ಬಿಎಲ್‌ಎಗಳನ್ನು ನೇಮಿಸಿದ ಕಾಂಗ್ರೆಸ್‌ ಏನು ತಪ್ಪು ಮಾಡಿಲ್ಲವೇ? ಎಂದು ಪ್ರಶ್ನೆ ಮಾಡಿದರು.
ಡಿ.ಕೆ.ಶಿವಕುಮಾರ್‌ ಅವರ ಬಳಿಯೇ ಮತದಾರರ ಪಟ್ಟಿ ಇದ್ದಾಗ, ಆಗಲೇ ಅಕ್ರಮದ ಬಗ್ಗೆ ದೂರು ನೀಡಬೇಕಿತ್ತು. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರವೇ ಇಲ್ಲ. ಅಥವಾ ಬಿಜೆಪಿ ನಾಯಕರ ಪಾತ್ರವೇ ಇಲ್ಲ. ಪಂಚಾಯಿತಿ ಕಾರ್ಯದರ್ಶಿ, ಅಂಚೆಯವರು, ತೆರಿಗೆ ಸಂಗ್ರಹ ಮಾಡುವವರು, ಆರೋಗ್ಯ ಸಿಬ್ಬಂದಿ ಹೀಗೆ ಇವರೆಲ್ಲರೂ ಮತದಾರರ ಪಟ್ಟಿಗೆ ತಯಾರಿಯಲ್ಲಿ ಭಾಗವಹಿಸುತ್ತಾರೆ. ಇವರೆಲ್ಲರೂ ಬಿಜೆಪಿಯವರಾ? ಪಟ್ಟಿಗೆ ಅಕ್ರಮವಾಗಿ ಹೆಸರನ್ನು ಬಿಜೆಪಿಯವರು ಹೇಗೆ ಸೇರಿಸಲು ಸಾಧ್ಯ? ಎಂದು ಪ್ರಶ್ನಿಸಿದರು.
ಕೆಲವು ರಾಜ್ಯಗಳಲ್ಲಿ ಕಾಂಗ್ರೆಸ್‌ ನಾಯಕರು ಬೋಗಸ್‌ ವೋಟ್‌ಗಳ ಅಕ್ರಮ ಮಾಡಿದ್ದಕ್ಕೆ ಬಂಧಿತರಾಗಿದ್ದಾರೆ. ಬೆಂಗಳೂರಿನ ಗಾಂಧಿನಗರದ ಒಂದು ಚಿಕ್ಕ ಮನೆಯಲ್ಲಿ 18 ಮುಸ್ಲಿಂ ಮತದಾರರಿದ್ದಾರೆ. ಒಂದೇ ಮನೆಯಲ್ಲಿ ಇಷ್ಟೊಂದು ವೋಟು ಇರಲು ಹೇಗೆ ಸಾಧ್ಯ? ಸರ್ವಜ್ಞನಗರ ಕ್ಷೇತ್ರದ ನಾಗವಾರ ವಾರ್ಡ್‌ನಲ್ಲಿ ಕಾಂಗ್ರೆಸ್‌ ಶಾಸಕರಿಗಿಂತಲೂ ಸಂಸದರಿಗೆ 5,965 ಹೆಚ್ಚುವರಿ ಮತ ಸಿಕ್ಕಿದೆ. ಹಾಗಾದರೆ ಕಾಂಗ್ರೆಸ್‌ಗೆ ಹೆಚ್ಚು ಮತ ಸಿಕ್ಕಿದ್ದು ಹೇಗೆ? ಎಚ್‌ಬಿಆರ್‌ ಲೇಔಟ್‌ನಲ್ಲಿ ಶಾಸಕರಿಗಿಂತಲೂ ಸಂಸದರಿಗೆ 3,646 ಮತ ಹೆಚ್ಚಾಗಿ ಸಿಕ್ಕಿದೆ. ಕಾಡುಗೊಂಡನಹಳ್ಳಿಯಲ್ಲಿ 3432 ಹೆಚ್ಚು ಮತ ಸಿಕ್ಕಿದೆ. ಹಾಗಾದರೆ ಇವೆಲ್ಲವನ್ನೂ ಸೇರಿಸಿದ್ದು ಯಾರು? ಸೋತ ಕೂಡಲೇ ಚುನಾವಣಾ ಆಯೋಗ ಸರಿ ಇಲ್ಲ ಎನ್ನುತ್ತಾರೆ ಎಂದರು.
2023ರ ವಿಧಾನಸಭಾ ಚುನಾವಣೆ ಬಳಿಕ, 2024ರಲ್ಲಿ ಲೋಕಸಭಾ ಚುನಾವಣೆ ನಡೆಯಿತು. ಒಂದೇ ವರ್ಷದಲ್ಲಿ ಕೆಲವು ಹೊಸ ಮತದಾರರು ಬಂದಿದ್ದಾರೆ. ಪದ್ಮನಾಭನಗರದಲ್ಲಿ 57,000 ಮತ ನನಗೆ ಬಂದಿದೆ. ಇನ್ನೂ 20,000 ಬರಬೇಕಿತ್ತು. ಆದರೆ ಬೇರೆ ಕಡೆಯಿಂದ ಮುಸ್ಲಿಮರನ್ನು ತಂದು ಇಲ್ಲಿಗೆ ಸೇರಿಸಿದ್ದಾರೆ. ಕಂದಾಯ ಇಲಾಖೆ ಎಲ್ಲ ಚುನಾವಣೆ ನಡೆಸುತ್ತದೆ. ಎಲ್ಲರೂ ಕಾಂಗ್ರೆಸ್‌ ಸರ್ಕಾರದವರೇ ಆಗಿರುವಾಗ ಅಕ್ರಮವಾಗಲು ಹೇಗೆ ಸಾಧ್ಯ? ಈ ಹಿಂದೆ ಕಾಂಗ್ರೆಸ್‌ ಎಲ್ಲ ಕಡೆ ಅಧಿಕಾರದಲ್ಲಿದ್ದಾಗ ಕಳ್ಳ ಮತದಾನ ಸಾಮಾನ್ಯವಾಗಿತ್ತು. ಮತ ಪೆಟ್ಟಿಗೆಗಳನ್ನು ಎತ್ತಿಕೊಂಡು ಹೋಗುತ್ತಿದ್ದರು. ಪೂಲನ್‌ ದೇವಿಯಂತಹ ಡಕಾಯಿತರ ಆಡಳಿತವೇ ಎಲ್ಲ ಕಡೆ ನಡೆಯುತ್ತಿತ್ತು. ಅಂತಹ ಚುನಾವಣೆ ರಾಹುಲ್‌ ಗಾಂಧಿಗೆ ಈಗ ಬೇಕಿದೆ ಎಂದರು.
ಇಂದಿರಾ ಗಾಂಧಿ ಚುನಾವಣಾ ಅಕ್ರಮ ಮಾಡಿ ಗೆದ್ದು ಅನರ್ಹರಾಗಿದ್ದರು. ಅದೇ ರೀತಿ ನರೇಂದ್ರ ಮೋದಿಗೆ ಆಗಿಲ್ಲ. ಗಾಂಧಿ ಕುಟುಂಬದ ಇತಿಹಾಸವೇ ಅಕ್ರಮ. ಚುನಾವಣೆಯಲ್ಲಿ ಅಕ್ರಮ ಮಾಡಿಯೇ ಎಲ್ಲರೂ ಗೆದ್ದಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು