1:27 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಅಧಿವೇಶನ ಇದ್ದಾಗಲೆಲ್ಲ ರಾಹುಲ್ ವಿದೇಶದಲ್ಲೇ ಹೆಚ್ಚಿರ್ತಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ

10/12/2025, 20:50

* ಪ್ರಧಾನಿ ವಿದೇಶ ಪ್ರವಾಸ ಬಗ್ಗೆ ತಗಾದೆ ತೆಗೆಯುವ ವಿಪಕ್ಷ ನಾಯಕರಿಗೆ ಜೋಶಿ ಖಡಕ್ ಚಾಟಿ

ನವದೆಹಲಿ(reporterkarnataka.com): “ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಸಂಸತ್ ಅಧಿವೇಶನ ಇದ್ದಾಗಲೆಲ್ಲ ಹೆಚ್ಚು ಕಾಲ ವಿದೇಶದಲ್ಲೇ ಇರುತ್ತಾರೆ” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಪ್ರಧಾನಿ ಮೋದಿ ವಿದೇಶ ಪ್ರವಾಸ ಬಗ್ಗೆ ತಗಾದೆ ತೆಗೆಯುತ್ತಿರುವ ಕಾಂಗ್ರೆಸ್ ನಾಯಕರ ಆರೋಪಕ್ಕೆ ತುಸು ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ ಜೋಶಿ, ರಾಹುಲ್ ಗಾಂಧಿ ಸಂಸತ್ ಅಧಿವೇಶನ ನಡೆಯುತ್ತಿರುವಾಗಲೇ ಏಕೆ ಹೆಚ್ಚು ಸಮಯ ವಿದೇಶ ಪ್ರವಾಸ ಕೈಗೊಳ್ಳುತ್ತಾರೆ? ಎಂದು ತರಾಟೆಗೆ ತೆಗೆದುಕೊಂಡರು.
ಸಂಸತ್ ಅಧಿವೇಶನ ನಡೆಯುತ್ತಿರುವಾಗ ರಾಹುಲ್ ಗಾಂಧಿ ಹೆಚ್ಚಾಗಿ ವಿದೇಶದಲ್ಲಿಯೇ ಇರುತ್ತಾರೆ. ಬಳಿಕ ” ಸಂಸತ್ತಿನಲ್ಲಿ ತಮಗೆ ಮಾತನಾಡಲು ಅವಕಾಶವೇ ಸಿಗಲಿಲ್ಲ” ಎಂಬ ವೃಥಾ ಆರೋಪ ಮಾಡುತ್ತಾರೆ ಎಂದು ಟೀಕಿಸಿದರು.
ವಾಸ್ತವದಲ್ಲಿ ರಾಹುಲ್ ಗಾಂಧಿ ಸಂಸತ್ ಅಧಿವೇಶನಕ್ಕೆ ಆಗಾಗ್ಗೆ ಗೈರಾಗುತ್ತಲೇ ಇರುತ್ತಾರೆ. ಅವರೊಬ್ಬ “ಅರೆಕಾಲಿಕ ಮತ್ತು ಬೇಜವಾಬ್ದಾರಿ ರಾಜಕೀಯ ನಾಯಕರು. ವಿಪಕ್ಷ ನಾಯಕನ ಸ್ಥಾನದಲ್ಲಿದ್ದು ಸ್ವಲ್ಪವೂ ಗಂಭೀರತೆಯೇ ಇಲ್ಲದ ರಾಜಕಾರಣಿ ಎಂದು ಜೋಶಿ ಪ್ರತ್ಯಾರೋಪ ಮಾಡಿದರು.
ಸಂಸತ್ತಿನ ಚಳಿಗಾಲದ ಅಧಿವೇಶನ ಮಧ್ಯೆ ರಾಹುಲ್ ಗಾಂಧಿ ಜರ್ಮನಿ ಭೇಟಿ ಕೈಗೊಳ್ಳುತ್ತಾರೆ. ಬಿಹಾರ ಚುನಾವಣೆ ವೇಳೆಯೂ ವಿದೇಶದಲ್ಲಿದ್ದರು. ಇದೀಗ ಬಿಜೆಪಿ – ಚುನಾವಣಾ ಆಯೋಗ ಒಪ್ಪಂದ ಮಾಡಿಕೊಂಡಿದೆ ಎಂಬ ವೃಥಾ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್, ಸೋತಾಗಲೆಲ್ಲ ಇವಿಎಂ ಮತ್ತು ಚುನಾವಣಾ ಆಯೋಗವನ್ನು ದೂಷಿಸುವ ಅಭ್ಯಾಸ ಬೆಳೆಸಿಕೊಂಡು ಬಿಟ್ಟಿದೆ ಎಂದು ಸಚಿವ ಜೋಶಿ ದೂರಿದರು.

*ಕರ್ನಾಟಕದಲ್ಲಿ ಗೆದ್ದಾಗ ಏನಂದಿದ್ರಿ?:* “ಜಾರ್ಖಂಡ್‌ನಲ್ಲಿ INDI ಮೈತ್ರಿಕೂಟ ಗೆದ್ದಾಗ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಾಗ ಏನು ಹೇಳಿದ್ದೀರಿ? ಬಿಹಾರದಲ್ಲಿ ಸೋತಾಗ, ಕರ್ನಾಟಕದ ಕೆಲ ಕ್ಷೇತ್ರಗಳಲ್ಲಿ ಸೋತಾಗ ಏನು ಹೇಳುತ್ತಿದ್ದೀರಿ? ಸ್ವಲ್ಪ ಪರಿಜ್ಞಾನ ಉಳ್ಳವರಾಗಿ ಮಾತನಾಡಿ” ಎಂದು ಕಾಂಗ್ರೆಸ್ ನಾಯಕರಿಗೆ ಜೋಶಿ ಚಾಟಿ ಬೀಸಿದರು.
ಕಾಂಗ್ರೆಸ್ ಸೋತಾಗ EVM ಮತ್ತು ಚುನಾವಣಾ ಆಯೋಗವನ್ನು ದೂಷಿಸುತ್ತದೆ. ಗೆಲುವಾದಾಗ ಬೇರೆಯದ್ದೇ ಪ್ರತಿಕ್ರಿಯೆ ನೀಡುತ್ತದೆ. ಹೀಗೆ ಸೋತಾಗೊಂದು, ಗೆದ್ದಾಗೊಂದು ಭಿನ್ನ ವಿಭಿನ್ನ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಚಿವ ಪ್ರಲ್ಹಾದ ಜೋಶಿ ಹರಿಹಾಯ್ದರು.

ಇತ್ತೀಚಿನ ಸುದ್ದಿ

ಜಾಹೀರಾತು