12:33 AM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ರಾಹುಲ್ ಉಡುಗೆ ಬಗ್ಗೆ ವ್ಯಂಗ್ಯವಾಡುವ ಬಿಜೆಪಿ ಮೋದಿಯವರ ದುಬಾರಿ ಸೂಟಿನ ಬಗ್ಗೆಯೂ ಮಾತನಾಡಲಿ; ದಿನೇಶ್ ಗುಂಡೂರಾವ್ 

10/09/2022, 16:55

ಬೆಂಗಳೂರು(reporterkarnataka.com):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ದುಬಾರಿ ಟಿ- ಶರ್ಟ್ ಬಗ್ಗೆ ವ್ಯಂಗ್ಯವಾಡುವ ಬಿಜೆಪಿ , ಮೋದಿಯವರ ದುಬಾರಿ ಸೂಟಿನ ಬಗ್ಗೆಯೂ ವ್ಯಂಗ್ಯವಾಡಲಿ. ಸ್ವಯಂಘೋಷಿತ ಫಕೀರ ಮೋದಿಯವರು ಲಕ್ಷಾಂತರ ಬೆಲೆ ಬಾಳುವ ಸೂಟು ಬೂಟು ಧರಿಸುತ್ತಾರೆ. ಅದು  ಬಿಜೆಪಿ ಯವರ ಕಣ್ಣಿಗೆ ಕಾಣುವುದಿಲ್ಲವೆ..? ‘ ಎಂದು ಕಾಂಗ್ರೆಸ್ ನಾಯಕ, ಕೆಪಿಸಿಸಿ ಮಾಜಿ ಅಧ್ಯಕ್ಷ  ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.

ಈ ಕುರತು ಟ್ವೀಟ್ ಮಾಡಿರುವ ಅವರು,‘ಬಿಜೆಪಿ ಯವರಿಗೆ ರಾಹುಲ್ ಗಾಂಧಿಯವರ ಉಡುಗೆ ತೊಡುಗೆ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ.?’ ಎಂದು ಕಿಡಿಕಾರಿದ್ದಾರೆ.

‘ಫಕೀರ ಎಂದರೆ ಸಂತನ ಪ್ರತಿರೂಪ. ಫಕೀರ ಎಂದು ಕರೆಸಿಕೊಳ್ಳುವವರು ಆಡಂಬರ-ಐಷಾರಾಮಿ ಬದುಕು ಸಾಗಿಸಬಾರದು. ಬಿಜೆಪಿ ಯವರು ಮೊದಲು ಸ್ವಯಂಘೋಷಿತ ಫಕೀರ ಮೋದಿಯವರಿಗೆ ದುಬಾರಿ ಜೀವನ ತ್ಯಜಿಸಲು ಹೇಳಲಿ. ನಂತರ ರಾಹುಲ್ ಗಾಂಧಿಯವರ ಬಗ್ಗೆ ಮಾತಾಡಲಿ. ಬಿಜೆಪಿ ಯವರ ತಟ್ಟೆಯಲ್ಲೇ ಹೆಗ್ಗಣ ಬಿದ್ದು ಕೊಳೆತು ನಾರುತ್ತಿದೆ. ಹೀಗಿರುವಾಗ ಇನ್ನೊಬ್ಬರ ತಟ್ಟೆಯ ಚಿಂತೆ ಯಾಕೆ.? ಎಂದು ದಿನೇಶ್ ಗುಂಡೂರಾವ್ ಬಿಜೆಪಿಯನ್ನು ಪ್ರಶ್ನೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು